ಆ್ಯಪ್ನಗರ

ದುಬರ್ಲ ಹಾಗೂ ವಿಭಜಿತ ಭಾರತವೇ ಮೋದಿ ಸರ್ಕಾರದ ಕೊಡುಗೆ: ರಾಹುಲ್ ವಾಗ್ದಾಳಿ!

ದುರ್ಬಲ ಹಾಗೂ ವಿಭಜಿತ ಭಾರತವೇ ಪ್ರಧಾನಿ ಮೋದಿ ಅವರ ಕಳೆದ ಆರು ವರ್ಷಗಳ ಆಡಳಿತದ ಕೊಡುಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮಿಳುನಾಡಿನ ಕರೂರ್‌ನಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋನಲ್ಲಿ ರಾಹುಲ್ ಗಾಂಧಿ ಮಾತನಾಡಿದರು.

Vijaya Karnataka Web 25 Jan 2021, 11:46 am
ಕರೂರ್: ದುರ್ಬಲ ಹಾಗೂ ವಿಭಜಿತ ಭಾರತವೇ ಪ್ರಧಾನಿ ಮೋದಿ ಅವರ ಕಳೆದ ಆರು ವರ್ಷಗಳ ಆಡಳಿತದ ಕೊಡುಗೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Vijaya Karnataka Web Rahul Gandhi
ತಮಿಳುನಾಡಿನ ಕರೂರ್‌ನಲ್ಲಿ ರಾಹುಲ್ ಗಾಂಧಿಗೆ ಸ್ವಾಗತ


ತಮಿಳುನಾಡಿನ ಕರೂರ್‌ನಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತಪ್ಪು ಆರ್ಥಿಕ ನೀತಿಗಳಿಂದ ದೇಶ ದುರ್ಬಲವಾಗಿದೆ. ಅಲ್ಲದೇ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಅಸಹಿಷ್ಣು ನೀತಿಗಳಿಂದ ದೇಶ ವಿಭಜಿತವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚಿಸುತ್ತಿದೆ. ವಿವಿಧತೆಯಲ್ಲೂ ಏಕತೆಗೆ ಸಾಕ್ಷಿಯಾಗಿರುವ ಅನೇಕ ಭಿನ್ನ ಭಿನ್ನ ಸಂಸ್ಕೃತಿಗಳ ಮೇಲೆ ವ್ಯವಸ್ಥಿತ ದಾಳಿ ನಡೆಸಲಾಗುತ್ತಿದೆ. ಆದರೆ ಅವರ ಈ ಉದ್ದೇಶ ಎಂದಿಗೂ ಈಡೇರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ತಮಿಳು ಸಂಸ್ಕೃತಿಯನ್ನು ಅವಮಾನಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ: ರಾಹುಲ್‌ ಗಾಂಧಿ ಗುಡುಗು

ದೇಶದ ಕೆಲವೇ ಕೆಲವು ಉದ್ಯಮಿಗಳ ಪರವಾಗಿರುವ ಆರ್ಥಿಕ ನೀತಿಗಳನ್ನು ಅನುಸರಿಸುತ್ತಿರುವ ಮೋದಿ ಸರ್ಕಾರ, ಅರ್ಥ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದೆ. ತನ್ನ ತಪ್ಪು ಗೋಚರವಾಗದಿರಲಿ ಎಂಬ ಕಾರಣಕ್ಕೆ ಕೋಮು ದ್ವೇಷಕ್ಕೆ ತುಪ್ಪ ಸುರಿಯುತ್ತಿದೆ ಎಂದು ರಾಹುಲ್ ಹರಿಹಾಯ್ದರು.


ಹೊಸ ಕೃಷಿ ಕಾಯ್ದೆಗಳ ಮೂಲಕ ಅನ್ನದಾತರ ಹಕ್ಕುಗಳನ್ನು ಕಸಿಯಲು ಹೊರಟಿರುವ ಮೋದಿ ಸರ್ಕಾರ, ಪ್ರತಿಭಟನಾನಿರತ ರೈತರನ್ನು ದೇಶದ್ರೋಹಿಗಳು ಎಂದು ಕರೆಯುವ ಮೂಲಕ ರೈತ ಸಮುದಾಯವನ್ನು ಅವಮಾನಿಸಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

'ಮನ್‌ ಕಿ ಬಾತ್' ಹೇಳಲು ಬಂದಿಲ್ಲ, ನಿಮ್ಮ ಮಾತು ಕೇಳಲು ಬಂದಿದ್ದೇನೆ: ತಮಿಳುನಾಡಲ್ಲಿ ರಾಹುಲ್ ಹೊಸ ವರಸೆ

ದೇಶದ ಏಕತೆಯನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಈ ವಿಭಜನಕಾರಿ ಸಿದ್ಧಾಂತವನ್ನು ತಿರಸ್ಕರಿಸುವ ಮೂಲಕ ಭಾರತವನ್ನು ಮತ್ತೆ ಸದೃಢವನ್ನಾಗಿ ಕಟ್ಟೋಣ ಎಂದು ಜನತೆಗೆ ರಾಹುಲ್ ಗಾಂಧಿ ಕರೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ