ಆ್ಯಪ್ನಗರ

ಬಲಗೊಳ್ಳುತ್ತಿರುವ 'ಫಣಿ' ಚಂಡಮಾರುತ: ಏ 30ರಂದು ತಮಿಳುನಾಡು, ಆಂಧ್ರ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ

'ಮುಂದಿನ 72 ಗಂಟೆಗಳಲ್ಲಿ ಚಂಡಮಾರುತ ನೈಋತ್ಯ ಶ್ರೀಲಂಕಾ ಕರಾವಳಿ ದಾಟಿ ಏಪ್ರಿಲ್ 30ರಂದು ಸಂಜೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ' ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್ 29 ಮತ್ತು 30ರಂದು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಏಪ್ರಿಲ್ 30 ಮತ್ತು ಮೇ 1ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Vijaya Karnataka Web 28 Apr 2019, 11:08 am
ಹೊಸದಿಲ್ಲಿ: ಹಿಂದೂ ಮಹಾಸಾಗರದ ಪೂರ್ವ ಭಾಗ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಹುಟ್ಟಿಕೊಂಡಿರುವ ಫಣಿ ಚಂಡಮಾರುತ ಮತ್ತಷ್ಟು ಬಲಗೊಳ್ಳುತ್ತಿದ್ದು, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಏಪ್ರಿಲ್ 28ರಿಂದ ಮೇ 1ರ ವರೆಗೆ ಪ್ರಭಾವ ಬೀರುವ ನಿರೀಕ್ಷೆಯಿದೆ.
Vijaya Karnataka Web Weather Report


ಮುಂದಿನ ಆರು ಗಂಟೆಗಳಲ್ಲಿ ತೀವ್ರ ಸ್ವರೂಪದ ಚಂಡಮಾರುತವಾಗಿ ಬಲಗೊಂಡು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರ ಸ್ವರೂಪ ತಾಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

'ಮುಂದಿನ 72 ಗಂಟೆಗಳಲ್ಲಿ ಚಂಡಮಾರುತ ನೈಋತ್ಯ ಶ್ರೀಲಂಕಾ ಕರಾವಳಿ ದಾಟಿ ಏಪ್ರಿಲ್ 30ರಂದು ಸಂಜೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ' ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 29 ಮತ್ತು 30ರಂದು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ. ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಏಪ್ರಿಲ್ 30 ಮತ್ತು ಮೇ 1ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಗಂಟೆಗೆ 80 ಕಿ.ಮೀ ವೇಗದ ಬಿರುಗಾಳಿ ಬೀಸಲಿದ್ದು, ನಂತರ ಅದು 90-100 ಕಿ.ಮೀ ವೇಗ ಪಡೆದುಕೊಳ್ಳಲಿದೆ. ಬಂಗಳ ಕೊಲ್ಲಿ ಹಾಗೂ ಶ್ರೀಲಂಕಾ ಕರಾವಳಿಯಲ್ಲಿ ಗಂಟೆಗೆ 115 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 29ರಂದು ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಕರಾವಳಿಯಲ್ಲಿ 170 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ