ಆ್ಯಪ್ನಗರ

ಕೊರೊನಾ ವಿರುದ್ಧ ಹೋರಾಟಕ್ಕೆ ಮೋದಿ ಜತೆ ಕೈಜೋಡಿಸಿದ ಮಮತಾ ಬ್ಯಾನರ್ಜಿ!

ಕೊರೊನಾ ವೈರಸ್‌ ಸೋಂಕಿನ ವಿರುದ್ಧ ಹೋರಾಟಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

Vijaya Karnataka Web 31 Mar 2020, 8:02 pm
ಕೋಲ್ಕತ: ಕೊರೊನಾ ವೈರಸ್‌ ಸೋಂಕಿನ ವಿರುದ್ಧ ಹೋರಾಟಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಜೋಡಿಸಿದ್ದಾರೆ.
Vijaya Karnataka Web Mamata Banerjee


ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಜತೆಗೆ ಪಶ್ಚಿಮ ಬಂಗಾಳ ರಾಜ್ಯ ಪರಿಹಾರ ನಿಧಿಗೂ ಕೂಡ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ನಾನು ಶಾಸಕಿಯಾಗಿ ಆಗಲಿ, ಮುಖ್ಯಮಂತ್ರಿಯಾಗಿ ಆಗಲಿ ಯಾವುದೇ ವೇತನ ಪಡೆಯುತ್ತಿಲ್ಲ. 7 ಬಾರಿ ಸಂಸದೆಯಾಗಿ ಆಯ್ಕೆಯಾಗಿದ್ದರೂ, ಸಂಸದರ ಪಿಂಚಣಿ ಹಣವನ್ನು ಪಡೆಯುತ್ತಿಲ್ಲ. ನನ್ನ ಸಂಪನ್ಮೂಲದ ಮಿತಿಯಲ್ಲಿ ನಾನು ಪ್ರಧಾನಿ ಪರಿಹಾರ ನಿಧಿಗೆ ಹಾಗೂ ರಾಜ್ಯ ಪರಿಹಾರ ನಿಧಿಗೆ ತಲಾ ₹5ಲಕ್ಷ ದೇಣಿಗೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಕೊರೊನಾ ಕಡಿವಾಣಕ್ಕೆ ಎರಡು ದಿನದ ಸಂಬಳ ನೀಡಿದ 2.5 ಲಕ್ಷ ಎಸ್‌ಬಿಐ ನೌಕರರು!

ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಅವರ ಕಚೇರಿಯಲ್ಲಿ ಕೆಲಸ ಮಾಡುವವರಿಗೂ ಒಂದು ದಿನದ ಸಂಬಳವನ್ನು ಪಿಎಂ ಕೇರ್‌ ಫಂಡ್‌ಗೆ ನೀಡುವಂತೆ ತಿಳಿಸಿದ್ದೇನೆ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಕೊರನಾ ಕಡಿವಾಣಕ್ಕೆ ಪ್ರಧಾನಿ ನಿಧಿಗೆ ದೇಣಿಗೆ ನೀಡಿದ ಧರ್ಮಗುರು ದಲೈಲಾಮಾ!

ಎಸ್‌ಬಿಐನಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 2,56,000 ನೌಕರರು ಕೊರೊನಾ ವಿರುದ್ಧದ ಹೋರಾಟಕ್ಕಾಗಿ ತಮ್ಮ ಎರಡು ದಿನಗಳ ಸಂಬಳವನ್ನು ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಗೆ ಕೊಡುಗೆ ನೀಡಲು ನಿರ್ಧರಿಸಿದ್ದಾರೆ. ಎಸ್‌ಬಿಐ ನೌಕರರ ಈ ಒಂದು ದಿಟ್ಟ ನಿರ್ಧಾರದಿಂದ ಪಿಎಂ ಕೇರ್ಸ್‌ ಫಂಡ್‌ಗೆ 100 ಕೋಟಿ ರೂಪಾಯಿ ಜಮೆಯಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ