ಆ್ಯಪ್ನಗರ

ಬಂಗಾಳಕ್ಕೆ ಲಗ್ಗೆ ಇಡಲು ಆರೆಸ್ಸೆಸ್‌ ಭರ್ಜರಿ ತಯಾರಿ

ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಈಗಾಗಲೇ ಕಾರ್ಯತಂತ್ರ ಆರಂಭಿಸಿದೆ

Vijaya Karnataka 14 Oct 2019, 9:47 pm
ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ2021ರಲ್ಲಿನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಈಗಾಗಲೇ ಕಾರ್ಯತಂತ್ರ ಆರಂಭಿಸಿದೆ. ರಾಜ್ಯದ ಎಲ್ಲಾ3,342 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲೂಒಂದೊಂದು ಶಾಖೆಯನ್ನು ತೆರೆಯುವ ಮೂಲಕ ತಳಮಟ್ಟದಲ್ಲಿ ಬಿಜೆಪಿ ಬಲವರ್ಧನೆ ಮಾಡಲು ಆರೆಸ್ಸೆಸ್‌ ಯೋಜಿಸಿದೆ.
Vijaya Karnataka Web rss


ಪ್ರಸ್ತುತ ಕೇವಲ ಆರ್ಧದಷ್ಟು ಗ್ರಾಮ ಪಂಚಾಯಿತಿಗಳು ಮತ್ತು 127 ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮಾತ್ರ ಆರ್‌ಎಸ್‌ಎಸ್ ಶಾಖೆಗಳನ್ನು ಹೊಂದಿದೆ. ಮುಂದಿನ ಪಂಚಾಯಿತಿ ಚುನಾವಣೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಬಿಜೆಪಿ ಸದಸ್ಯರು ಇರಬೇಕು ಎನ್ನುವುದು ಆರ್‌ಎಸ್‌ಎಸ್‌ ನಿಲುವು.

ಆರ್‌ಎಸ್‌ಎಸ್‌ ಅಸ್ತಿತ್ವ ಇಲ್ಲದ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಅಲ್ಲಿ ಶಾಖೆ ತೆರೆಯಲು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಇತ್ತೀಚೆಗೆ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದ ಸಂಘಟನೆಯ ಮುಖ್ಯಸ್ಥ ಮೋಹನ್‌ ಭಾಗವತ್‌ ಜತೆ ಚರ್ಚಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಪ್ರಚಾರ ಪ್ರಮುಖ ಬಿಪ್ಲಬ್‌ ರಾಯ್‌ ಮಾಹಿತಿ ನೀಡಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂಶಾಖೆಯನ್ನು ಆರಂಭಿಸುವಲ್ಲಿಆರೆಸ್ಸೆಸ್‌ ಹೊಂದಿರುವ ದೊಡ್ಡ ಸವಾಲೆಂದರೆ, ಮುಸ್ಲಿಂ ಪ್ರಾಬಲ್ಯ. ಆರೆಸ್ಸೆಸ್‌ ಇನ್ನೂ ಶಾಖೆಗಳನ್ನೇ ಆರಂಭಿಸಿದ ಹಲವು ಗ್ರಾಮ ಪಂಚಾಯಿತಿಗಳಲ್ಲಿಶೇ.80ರಷ್ಟು ಮುಸ್ಲಿಂ ಜನಸಂಖ್ಯೆಯಿದೆ. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿಶೇ.27ರಷ್ಟು ಮುಸ್ಲಿಂ ಜನಸಂಖ್ಯೆಯಿದ್ದು, 23 ಜಿಲ್ಲೆಗಳ ಪೈಕಿ ಮೂರು ಮುಸ್ಲಿಂ ಪ್ರಾಬಲ್ಯ ಹೊಂದಿವೆ.

''ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿರುವ ಹಿಂದೂಗಳಿಂದ ಆರೆಸ್ಸೆಸ್‌ ಶಾಖೆ ಆರಂಭಿಸಲು ಆಹ್ವಾನ ಬಂದಿದೆ. ಹಿಂದೂಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಆರೆಸ್ಸೆಸ್‌ ಬೆಂಬಲ ಕೋರುತ್ತಿದ್ದಾರೆ. ಒಂದು ವೇಳೆ ಮುಸ್ಲಿಮರು ಹೆಚ್ಚಾಗಿರುವ ಕಡೆ ಶಾಖೆ ಆರಂಭಿಸುವುದು ಕಷ್ಟವಾದರೆ, ಸಂಘವು ಸೇವೆ ಮತ್ತು ಇತರೆ ಧಾರ್ಮಿಕ ಚಟುವಟಿಕೆಗಳ ಮೂಲಕ ತನ್ನ ಅಸ್ತಿತ್ವವನ್ನು ಸಾರಲಿದೆ,'' ಎಂದು ಬಿಪ್ಲಬ್‌ ಮಾಹಿತಿ ನೀಡಿದ್ದಾರೆ.

ಆರೆಸ್ಸೆಸ್‌ ಜತೆ ಗುರಿತಿಸಿಕೊಂಡಿರುವ ಹಲವು ಸಂಘ ಸಂಸ್ಥೆಗಳು ಶಿಕ್ಷಣ, ಆರೋಗ್ಯ, ಸ್ವಸಹಾಯ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು ಎಂದು ಸಂಘಟನೆಯ ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ದಿಲೀಪ್‌ ಘೋಷ್‌, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸುಬ್ರತಾ ಚಟರ್ಜಿ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕಿಶೋರ್‌ ಬರ್ಮನ್‌ ಈ ಮೂವರು ಆರೆಸ್ಸೆಸ್‌ ಪ್ರಚಾರಕರನ್ನು ಪ್ರಸ್ತುತ ಬಿಜೆಪಿಯಲ್ಲಿನಿಯೋಜನೆ ಮಾಡಲಾಗಿದೆ. ಈ ಮೂವರಿಗೂ ವಿವಿಧ ನಾಯಕರು, ಪದಾಧಿಕಾರಿಗಳ ಜತೆ ಸಭೆಗಳನ್ನು ನಡೆಸಿ ಕಾರ್ಯತಂತ್ರ ರೂಪಿಸುವ ಹೊಣೆಗಾರಿಕೆಯನ್ನು ನೀಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ