ಆ್ಯಪ್ನಗರ

ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ: ಭಾರಿ ಹಿಂಸಾಚಾರ, 11 ಮಂದಿ ಬಲಿ

ಮಾಧ್ಯಮ ವಾಹನಗಳ ಮೇಲೆ ಕಲ್ಲು ತೂರಾಟ

Vijaya Karnataka Web 14 May 2018, 3:52 pm
ಕೋಲ್ಕೊತಾ: ಭಾರಿ ವಿವಾದ ಹಾಗೂ ರಾಜಕೀಯ ಜಿದ್ದಾಜಿದ್ದಿಯಿಂದ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ ವೇಳೆ ಭಾರಿ ಹಿಂಸಾಚಾರ ನಡೆದಿದೆ. ವಿವಿಧ ಕಡೆ ನಡೆದ ಗಲಭೆ, ದೊಂಬಿಯಲ್ಲಿ 11 ಮಂದಿ ಮೃತಪಟ್ಟಿದ್ದಾರೆ.
Vijaya Karnataka Web ಪೊಲೀಸ್‌
ಪೊಲೀಸ್‌


ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಹಿಂಸಾಚಾರದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌, ಮುಕುಲ್‌ ರಾಯ್‌ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಚುನಾವಣೆ ಆಯೋಗಕ್ಕೆ ಮಧ್ಯಾಹ್ನದ ವೇಳೆಗೆ ಹಿಂಸಾಚಾರಕ್ಕೆ ಸಂಬಂಧಿಸಿ 500 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹಲವೆಡೆ ಭಾರಿ ಮಾತಿನ ಚಕಮಕಿ, ಘರ್ಷಣೆಗಳು ನಡೆದಿವೆ.

ಕೂಚ್ ಬಿಹಾರ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕೆಲವೆಡೆ ಮಾಧ್ಯಮ ವಾಹನಗಳ ಮೇಲೆ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವುದು ವರದಿಯಾಗಿದೆ. ಕೆಲವು ಕಡೆ ಬ್ಯಾಲೆಟ್‌ ಬಾಕ್ಸ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ದುಷ್ಕರ್ಮಿಗಳು ಬಾಂಬ್‌ಗಳನ್ನು ಹಿಡಿದುಕೊಂಡು, ಕೈಯಲ್ಲಿ ಕೋಲುಗಳನ್ನು ಹಿಡಿದು ಹಿಂಸಾಚಾರ ಎಸಗಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಉಂಟಾದ ಹಿಂಸಾಚಾರದಿಂದಾಗಿ ಚುನಾವಣೆ ವಿಚಾರ ಹಲವು ಸಲ ಕೋರ್ಟ್‌ ಕಟಕಟೆವರೆಗೂ ಹೋಗಿತ್ತು. ಇದೇ ಮೊದಲ ಬಾರಿ ವಾಟ್ಸಪ್‌, ಇ-ಮೇಲ್‌ ಮೂಲಕ ನಾಮಪತ್ರ ಸಲ್ಲಿಸಲಾಗಿತ್ತು.

ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ನಡೆಯಲಿರುವ ಪ್ರಮುಖ ಮತಸಮರ ಇದಾಗಿರುವುದರಿಂದ 2019ರ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತೆ ಎಂದೇ ರಾಜಕೀಯ ಪಕ್ಷಗಳು ಪರಿಗಣಿಸಿವೆ. ಮೇ 17ರಂದು ಫಲಿತಾಂಶ ಹೊರಬೀಳಲಿದೆ.

ಒಟ್ಟು ಗ್ರಾಮ ಪಂಚಾಯಿತಿಗಳು - 3,358
ಒಟ್ಟು ಸ್ಥಾನಗಳು - 48,650
ಜಿಲ್ಲಾ ಪಂಚಾಯತಿಗಳು - 20
ಒಟ್ಟು ಜಿ.ಪಂ. ಸ್ಥಾನಗಳು - 82

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ