ಆ್ಯಪ್ನಗರ

ಬಂಗಾಳ ಪಂಚಾಯತ್‌ ಚುನಾವಣೆ: ದಿನಾಂಕ ವಿಸ್ತರಣೆಗೆ ಸುಪ್ರೀಂ ನಕಾರ

ಮುಂದಿನ ತಿಂಗಳು ಪಶ್ಚಿಮ ಬಂಗಾಳದಲ್ಲಿ ನಡೆಯುವ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸುವ ಸುಪ್ರೀಂ ಕೋರ್ಟ್‌, ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲು ನಿರಾಕರಿಸಿದೆ.

Vijaya Karnataka 10 Apr 2018, 9:57 am
ಹೊಸದಿಲ್ಲಿ: ಮುಂದಿನ ತಿಂಗಳು ಪಶ್ಚಿಮ ಬಂಗಾಳದಲ್ಲಿ ನಡೆಯುವ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸುವ ಸುಪ್ರೀಂ ಕೋರ್ಟ್‌, ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲು ನಿರಾಕರಿಸಿದೆ.
Vijaya Karnataka Web ಸುಪ್ರೀಂ ಕೋರ್ಟ್‌


''ನಾವು ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ ಸೂಕ್ತ ಪರಿಹಾರಕ್ಕಾಗಿ ಅಭ್ಯರ್ಥಿಗಳು ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ,'' ಎಂದು ನ್ಯಾ.ಆರ್‌.ಕೆ.ಅಗರ್ವಾಲ್‌ ಮತ್ತು ನ್ಯಾ.ಎ.ಎಂ.ಸಪ್ರೆ ಅವರಿದ್ದ ದ್ವಿಸದಸ್ಯ ಪೀಠ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಅಡಳಿತಾರೂಢ ತೃಣಮೂಲ ಕಾಂಗ್ರೆಸ್‌(ಟಿಎಂಸಿ) ದೊಡ್ಡ ಮಟ್ಟದ ಚುನಾವಣಾ ಹಿಂಸಾಚಾರದಲ್ಲಿ ತೊಡಗಿದೆ ಹಾಗೂ ಪಂಚಾಯಿತಿ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮನಿರ್ದೇಶನ ಸಲ್ಲಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಮಾ.6ರಂದು ಬಿಜೆಪಿ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು. ಪಶ್ಚಿಮ ಬಂಗಾಳ ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿಗಳಿಗೆ ನಾಮಪತ್ರದ ಅರ್ಜಿಗಳನ್ನು ನೀಡುತ್ತಿಲ್ಲ. ಹಾಗಾಗಿ ಆನ್‌ಲೈನ್‌ ಮೂಲಕ ನಾಮಪತ್ರ ಅರ್ಜಿಗಳನ್ನು ಒದಗಿಸಬೇಕು ಹಾಗೂ ನಾಮಪತ್ರ ಸ್ವೀಕರಿಸಲು ಕಡೆಯ ದಿನಾಂಕವನ್ನು ವಿಸ್ತರಿಸಬೇಕು. ಚುನಾವಣಾ ಭದ್ರತೆಗೆ ಕೇಂದ್ರ ಅರೆಸೈನಿಕ ಪಡೆಯನ್ನು ನೇಮಿಸಬೇಕು ಎಂಬುದು ಬಿಜೆಪಿ ಬೇಡಿಕೆಯಾಗಿತ್ತು.

ಪಂಚಾಯಿತಿ ಚುನಾವಣೆ ಮೇ 1, 3 ಮತ್ತು 5ರಂದು ನಡೆಯಲಿದೆ. ಮೇ 8ರಂದು ಮತಎಣಿಕೆ ಕಾರ್ಯ ನಡೆಯಲಿದೆ. ನಾಮಪತ್ರ ಸಲ್ಲಿಸಲು ಸೋಮವಾರವೇ (ಏ.9) ಕೊನೆಯ ದಿನಾಂಕವಾಗಿದ್ದು, ನಾಮಪತ್ರ ಪರಿಶೀಲಿಸಲು ಏಪ್ರಿಲ್‌ 11 ಕೊನೆಯ ದಿನಾಂಕವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ