ಆ್ಯಪ್ನಗರ

ಅತ್ಯಾಚಾರ ಆರೋಪಿ ವಜಾ ಏಕಿಲ್ಲ? ರಾಜ್ಯಪಾಲರ ಪ್ರಶ್ನೆ

ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡಿರುವ ಕುರಿತು ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 5 Mar 2017, 5:10 pm
ಲಖನೌ: ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿಯನ್ನು ಇನ್ನೂ ಸಚಿವ ಸಂಪುಟದಲ್ಲಿ ಇಟ್ಟುಕೊಂಡಿರುವ ಕುರಿತು ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
Vijaya Karnataka Web why rape accused minister still in your cabinet up governor writes to akhilesh yadav
ಅತ್ಯಾಚಾರ ಆರೋಪಿ ವಜಾ ಏಕಿಲ್ಲ? ರಾಜ್ಯಪಾಲರ ಪ್ರಶ್ನೆ


ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ಗೆ ರಾಜ್ಯಪಾಲ ರಾಮ್‌ ನಾಯ್ಕ್‌ ಪತ್ರ ಬರೆದಿದ್ದು, ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪ್ರಜಾಪತಿಯನ್ನು ಇನ್ನೂ ಸಚಿವ ಸಂಪುಟದಿಂದ ಏಕೆ ವಜಾ ಮಾಡದ ಕುರಿತು ಪ್ರಶ್ನಿರುವುದಾಗಿ ರಾಜ ಭವನದ ಮೂಲಗಳು ತಿಳಿಸಿವೆ.

ಮಹಿಳೆ ಮೇಲೆ ಅತ್ಯಾಚಾರ ಹಾಗೂ ಆಕೆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಪ್ರಜಾಪತಿ ವಿರುದ್ಧ ಉತ್ತರ ಪ್ರದೇಶ ಪೊಲೀರು ದೂರು ದಾಖಲಿಸಿದ್ದರು. ಶನಿವಾರದಂದು ಪೊಲೀಸರು ಪ್ರಜಾಪತಿ ಪಾಸ್‌ಪೋರ್ಟ್‌ ರದ್ದುಗೊಳಿಸಿ ಆದೇಶ ಹೊರಡಿಸಿದ್ದರು. ದೂರು ದಾಖಲಾಗಿ ಹಲವಾರು ದಿನಗಳು ಕಳೆದರೂ ಪ್ರಜಾಪತಿಯನ್ನು ಸಚಿವ ಸಂಪುಟದಿಂದ ಕೈಬಿಟ್ಟಿಲ್ಲ. ಹೀಗಾಗಿ ರಾಜ್ಯಪಾಲರು ಈ ಕುರಿತು ಅಸಮಾಧಾನ ವ್ಯಕ್ತಪಡಿಸಿ ಅಖಿಲೇಶ್‌ಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶದ ಚುನಾವಣಾ ರ‍್ಯಾಲಿಯಲ್ಲಿ ಶುಕ್ರವಾರದಂದು ಪ್ರಧಾನಿ ಮೋದಿ ಕೂಡಾ ಉತ್ತರ ಪ್ರದೇಶದ ಪೊಲೀಸ್‌ ವ್ಯವಸ್ಥೆ ಕುರಿತು ಪ್ರಶ್ನಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ