ಆ್ಯಪ್ನಗರ

ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆ ದುರ್ಬಲವಾಗಲು ಬಿಡಲ್ಲ: ಮೋದಿ

ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸಲು ನಮ್ಮ ಸರಕಾರ ಬಿಡುವುದಿಲ್ಲ. ಈ ವಿಷಯದಲ್ಲಿ ಕಾಂಗ್ರೆಸ್‌ ಅಪಪ್ರಚಾರ ನಡೆಸುತ್ತಿದ್ದು, ಅದಕ್ಕೆ ಕಿವಿಗೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಅವರು ದಲಿತ ಸಮುದಾಯದಲ್ಲಿ ಭರವಸೆ ತುಂಬಿದ್ದಾರೆ.

Vijaya Karnataka 14 Apr 2018, 10:09 am
ಹೊಸದಿಲ್ಲಿ: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆಯನ್ನು ದುರ್ಬಲಗೊಳಿಸಲು ನಮ್ಮ ಸರಕಾರ ಬಿಡುವುದಿಲ್ಲ. ಈ ವಿಷಯದಲ್ಲಿ ಕಾಂಗ್ರೆಸ್‌ ಅಪಪ್ರಚಾರ ನಡೆಸುತ್ತಿದ್ದು, ಅದಕ್ಕೆ ಕಿವಿಗೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಅವರು ದಲಿತ ಸಮುದಾಯದಲ್ಲಿ ಭರವಸೆ ತುಂಬಿದ್ದಾರೆ.
Vijaya Karnataka Web PM Modi


ದಿಲ್ಲಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ರಾಷ್ಟ್ರೀಯ ಸ್ಮಾರಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಈ ಕಾಯಿದೆಯ ವ್ಯಾಪ್ತಿಗೆ ಮೊದಲು 22 ಅಪರಾಧಗಳು ಒಳಪಡುತ್ತಿದ್ದವು. ಆದರೆ ನಮ್ಮ ಸರಕಾರ ಆ ವ್ಯಾಪ್ತಿಯನ್ನು 47 ಅಪರಾಧಗಳಿಗೆ ವಿಸ್ತರಿಸಿತು. ಕಾಯಿದೆಯನ್ನು ಬಲಪಡಿಸುವತ್ತ ಕೇಂದ್ರ ಸರಕಾರ ಯತ್ನಿಸುತ್ತಿದೆಯೇ ಹೊರತು ನಿಸ್ಸಾರಗೊಳಿಸಲು ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.


ಸುಪ್ರೀಂ ಕೋರ್ಟ್‌ ತೀರ್ಪನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ