ಆ್ಯಪ್ನಗರ

ಯೋಗಿ ಆದಿತ್ಯನಾಥ್‌ ರ‍್ಯಾಲಿಯಲ್ಲಿ ಮುಸ್ಲಿಂ ಮಹಿಳೆಯ ಬುರ್ಖಾ ತೆಗೆಸಿದ ಪೊಲೀಸರು

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Vijaya Karnataka Web 22 Nov 2017, 5:26 pm
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾಗವಹಿಸಿದ್ದ ರ‍್ಯಾಲಿಯೊಂದರಲ್ಲಿ ಮುಸ್ಲಿಂ ಮಹಿಳೆಯ ಬುರ್ಖಾವನ್ನು ಪೊಲೀಸರು ತೆಗೆಸಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ.
Vijaya Karnataka Web woman asked to remove burqa at cm yogi adityanath rally police to investigate
ಯೋಗಿ ಆದಿತ್ಯನಾಥ್‌ ರ‍್ಯಾಲಿಯಲ್ಲಿ ಮುಸ್ಲಿಂ ಮಹಿಳೆಯ ಬುರ್ಖಾ ತೆಗೆಸಿದ ಪೊಲೀಸರು


ಈ ಘಟನೆ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಬಲಿಯಾದಲ್ಲಿ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರ‍್ಯಾಲಿಯೊಂದರಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ಭದ್ರತಾ ಪರಿಶೀಲನೆ ನಡೆಸಿದ ಪೊಲೀಸರು, ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದು ಬುರ್ಖಾ ತೆಗೆಯುವಂತೆ ಸೂಚಿಸಿದರು.

ಸಾಕಷ್ಟು ವಾದ-ಪ್ರತಿವಾದಗಳ ನಂತರ ಆ ಮಹಿಳೆ ಬುರ್ಖಾ ತೆಗೆದು ಕೇಸರಿ ಬಣ್ಣದ ವಸ್ತ್ರದಲ್ಲಿ ತನ್ನ ಮುಖ ಮುಚ್ಚಿಕೊಂಡಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದಕ್ಕೂ ಮುನ್ನ ಮೀರತ್‌ನಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು. ಬಲಿಯಾ ಘಟನೆ ವಿವಾದವಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ತನಿಖೆಗೆ ಆದೇಶಿಸಿರುವ ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್ ಕುಮಾರ್‌, ಶೀಘ್ರದಲ್ಲೇ ವರದಿ ಮಂಡಿಸಲು ತನಿಖಾ ತಂಡಕ್ಕೆ ಸೂಚಿಸಲಾಗಿದೆ ಎಂದರು.

Woman asked to remove burqa at CM Yogi Adityanath rally, police to investigate

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ