ಆ್ಯಪ್ನಗರ

ಬಿಜೆಪಿ ವಿರುದ್ಧ ಘೋಷಣೆ: ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದ ಮಹಿಳೆಗೆ ಜಾಮೀನು

ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯನ್ನು ವಶಕ್ಕೆ ಪಡೆದು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

TIMESOFINDIA.COM 4 Sep 2018, 3:19 pm
ತೂತುಕುಡಿ: ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಮಹಿಳೆಯನ್ನು ವಶಕ್ಕೆ ಪಡೆದು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಲಾಯ್ತು. ತೂತುಕುಡಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದ್ದು ಸದ್ಯ ಮಹಿಳೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾಳೆ.
Vijaya Karnataka Web bjp


ಸೋಫಿಯಾ (22) ಬಂಧನಕ್ಕೊಳಗಾಗಿದ್ದ ಮಹಿಳೆಯಾಗಿದ್ದಾಳೆ.

ಸೋಪಿಯಾ ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಸಿಟ್ಟಾದ ಸೌಂದರರಾಜನ್ ಪ್ರಶ್ನಿಸಿದ್ದಾರೆ. ಇಬ್ಬರ ನಡುವೆ ವಾಗ್ವಾದ ಕೂಡ ನಡೆಯಿತು.

ಘಟನೆ ಸಂಬಂಧ ವಿಮಾನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಹಾಗೂ ವಿಮಾನ ಸಂಸ್ಥೆಗಳಿಗೆ ದೂರು ಸಲ್ಲಿಕೆಯಾದ ಮೇಲೆ ಸೋಫಿಯಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಸೋಫಿಯಾ ವಿರುದ್ಧ ಭಾರತೀಯ ದಂಡ ಸಂಹಿತೆ 290 ಮತ್ತು 505(ಐ)(ಬಿ) ಮತ್ತು ತಮಿಳುನಾಡು ಸಿಟಿ ಪೊಲೀಸ್ ಕಾಯಿದೆಯ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತೂತುಕುಡಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮುರಳಿ ರಂಭಾ ತಿಳಿಸಿದ್ದಾರೆ.

ಸೋಫಿಯಾ ಕೆನಡಾದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದು, ಭಾರತಕ್ಕೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

'ನನ್ನ ಬ್ಯಾಗ್ ತೆಗೆದುಕೊಳ್ಳಲು ಹೋಗುತ್ತಿದ್ದ ಸಂದರ್ಭದಲ್ಲಿ ಮಹಿಳೆ ಬಿಜೆಪಿ ವಿರುದ್ಧ ಘೋಷಣೆ ಕೂಗಲು ಆರಂಭಿಸಿದಳು. ಸಾರ್ವಜನಿಕ ಸ್ಥಳದಲ್ಲಿ ಭಯ ಸೃಷ್ಟಿಸಲು ಯತ್ನಿಸಿದ ಪ್ರಕರಣ ಆಕೆಯ ವಿರುದ್ಧ ದಾಖಲಾಗಿದೆ. ಬಂಧಿತ ಮಹಿಳೆ ಸಾಮಾನ್ಯ ಪ್ರಯಾಣಿಕಳಾಗಿರಲಿಲ್ಲ. ಯಾವುದೋ ತೀವ್ರಗಾವಿ ಸಂಘಟನೆಯ ಸದಸ್ಯಳಾಗಿರಬೇಕು'- ತಮಿಳಿಸೈ

ಏತನ್ಮಧ್ಯೆ, ಬಂಧಿತಳ ತಂದೆ ಕೂಡ ಬಿಜೆಪಿ ಮುಖಂಡರು ಹಾಗೂ ಇತರೆ ಪಕ್ಷದ ಸದಸ್ಯರ ವಿರುದ್ಧ ಪ್ರತಿದೂರು ಸಲ್ಲಿಸಿದ್ದಾರೆ. ಇಬ್ಬರ ದೂರುಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್‌ಪಿ ಮುರಳಿ ರಂಭಾ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ