ಆ್ಯಪ್ನಗರ

ಎಗ್ ಕರಿ ಮಾಡದ ಪತ್ನಿಯನ್ನು ಗುಂಡಿಕ್ಕಿ ಕೊಂದ

ಎಗ್ ಕರಿ ಮಾಡಲು ನಿರಾಕರಿಸಿದಳೆಂಬ ಕ್ಷುಲ್ಲಕ ಕಾರಣಕ್ಕೆ ಕುಡಿದ ಅಮಲಿನಲ್ಲಿದ್ದ ಪತಿಯೊಬ್ಬ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಹೇಯ ಘಟನೆ ಜಿಲ್ಲೆಯ ದೆವದಾಸ್ ಗ್ರಾಮದಲ್ಲಿ ಗುರುವಾರ ನಡೆದಿದೆ.

TIMESOFINDIA.COM 14 Jul 2018, 11:39 am
ಶಹಜಾನ್‌ಪುರ: ಎಗ್ ಕರಿ ಮಾಡಲು ನಿರಾಕರಿಸಿದಳೆಂಬ ಕ್ಷುಲ್ಲಕ ಕಾರಣಕ್ಕೆ ಕುಡಿದ ಅಮಲಿನಲ್ಲಿದ್ದ ಪತಿಯೊಬ್ಬ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಹೇಯ ಘಟನೆ ಜಿಲ್ಲೆಯ ದೆವದಾಸ್ ಗ್ರಾಮದಲ್ಲಿ ಗುರುವಾರ ನಡೆದಿದೆ.
Vijaya Karnataka Web Shot


ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದ್ದು, ಮೃತಳನ್ನು ಮಂಗೇಶ್ ಶುಕ್ಲಾ ( 30) ಎಂದು ಗುರುತಿಸಲಾಗಿದೆ.

ಪತಿ ನವನೀತ್ (33) ಎಗ್ ಕರಿ ಮಾಡೆಂದಾಗ ಗುರುವಾರವಾದ್ದರಿಂದ ಮಂಗೇಶ್ ನಿರಾಕರಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ನವನೀತ್ ತನ್ನಪ್ಪ ಇಟ್ಟುಕೊಂಡಿದ್ದ ಪರವಾನಿಗೆ ಹೊಂದಿದ್ದ ಗನ್ ತೆಗೆದುಕೊಂಡು ಪತ್ನಿ ಮೇಲೆ ಗುಂಡು ಹಾರಿಸಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದ ಮಂಗೇಶ್ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದಾರೆ.

12 ವರ್ಷದ ಹಿಂದೆ ಮಂಗೇಶ್ ಮತ್ತು ನವನೀತ್ ಮದುವೆಯಾಗಿದ್ದು, ಅವರಿಗೆ 3 ಜನ ಮಕ್ಕಳಿದ್ದಾರೆ. ವೃತ್ತಿಯಲ್ಲಿ ರೈತನಾಗಿರುವ ನವನೀತ್ ಈ ಕೃತ್ಯವನ್ನೆಸಗಿದಾಗ ಆತನ ಅಪ್ಪ ಅಮ್ಮ ಆಸ್ಪತ್ರೆಗೆ ಮತ್ತು ಮಕ್ಕಳು ಶಾಲೆಗೆ ಹೋಗಿದ್ದರು.

ಕುಡಿತದ ಅಮಲು ಇಳಿದ ಬಳಿಕ ಆರೋಪಿ ತನ್ನ ಕೃತ್ಯದ ಬಗ್ಗೆ ಪಶ್ಚಾತಾಪ ಪಟ್ಟುಕೊಂಡಿದ್ದಾನೆ, ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ