ಆ್ಯಪ್ನಗರ

ಅಧಿಕಾರಿ ಸೋಗಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟವನಿಗೆ ಮಹಿಳೆಯಿಂದ ಚಪ್ಪಲಿ ಏಟು!

ಹಣ ನೀಡುವುದಾಗಿ ಹೇಳಿ ನಗರದಲ್ಲಿರುವ ಮಾವಿನ ತೋಟವೊಂದಕ್ಕೆ ಕರೆಯಿಸಿಕೊಂಡು, ಅಧಿಕಾರಿಯನ್ನು ಥಳಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

TIMESOFINDIA.COM 8 May 2019, 3:43 pm
ಜಮ್‍ಶೇಡ್‍ಪುರ: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಯ ಸೋಗು ಹಾಕಿಕೊಂಡು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಕ್ಕೆ ಇಟ್ಟ ವ್ಯಕ್ತಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿದ ಘಟನೆ ಜಾರ್ಖಂಡ್ ರಾಜ್ಯದ ಜಮ್‍ಶೇಡ್‍ಪುರದಲ್ಲಿ ನಡೆದಿದೆ.
Vijaya Karnataka Web mango


ಹಣ ನೀಡುವುದಾಗಿ ಹೇಳಿ ವ್ಯಕ್ತಿಯನ್ನು ಕರೆಯಿಸಿಕೊಂಡು, ಹಿಗ್ಗಾಮುಗ್ಗಾ ಥಳಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಕೋಲಿನಿಂದ ಬಾರಿಸುತ್ತಿದ್ದ. ಬಳಿಕ ಬಂದ ಮಹಿಳೆ ಆತನನ್ನು ಚಪ್ಪಲಿಯಿಂದ ಥಳಿಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಘಟನೆ ಸಂಬಂಧ ಆರೋಪಿ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ