ಆ್ಯಪ್ನಗರ

ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಪ್ರಿಯಕರನ ಜೀವಂತ ದಹನ

ಮಹಿಳೆಯೊಬ್ಬಳು ತನ್ನ ಪ್ರಿಯಕರನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿ ಜೀವಂತ ಸುಟ್ಟು ಹಾಕಿದ ಬೆಚ್ಚಿ ಬೀಳಿಸುವ ಘಟನೆ ಪ್ರಕಾಶಂ ಜಿಲ್ಲೆಯ ಚೌಟಾಪಲ್ಲಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

TIMESOFINDIA.COM 30 Jul 2018, 12:17 pm
ವಿಜಯವಾಡ: ಮಹಿಳೆಯೊಬ್ಬಳು ತನ್ನ ಪ್ರಿಯಕರನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿ ಜೀವಂತ ಸುಟ್ಟು ಹಾಕಿದ ಬೆಚ್ಚಿ ಬೀಳಿಸುವ ಘಟನೆ ಪ್ರಕಾಶಂ ಜಿಲ್ಲೆಯ ಚೌಟಾಪಲ್ಲಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
Vijaya Karnataka Web Fire- Kill


ಮೃತನನ್ನು ಪೊಡಿಲಿ ನಿವಾಸಿ ಶೇಕ್ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಆತನನ್ನು ಹತ್ಯೆಗೈದ ಬಳಿಕ ಆರೋಪಿ ಶಕೀರಾ (28) ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ. ಶೇಕ್ ಮರಿಪುಡಿ ಪೊಲೀಸ್ ಠಾಣೆಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಅದರ ಜತೆಗೆ ಶಕೀರಾ ಸಹಭಾಗಿತ್ವದಲ್ಲಿ ಕೋಳಿ ಫಾರಂ ಉದ್ಯಮವನ್ನು ಸಹ ನಡೆಸುತ್ತಿದ್ದ.

ಶರೀರಾ ಮತ್ತು ಶೇರ್ ಶಬ್ಬೀರ್ ನಡುವೆ ಅಕ್ರಮ ಸಂಬಂಧವಿತ್ತು. ಅವರಿಬ್ಬರು ಆಗಾಗ ಕೋಳಿ ಫಾರಂನಲ್ಲಿ ಭೇಟಿಯಾಗುತ್ತಿದ್ದರು. ಕಳೆದ 8 ತಿಂಗಳಿಂದ ಇಬ್ಬರ ನಡುವೆ ಆರ್ಥಿಕ ಕಲಹವಿದ್ದು, ಈ ಹಿನ್ನೆಲೆಯಲ್ಲಿಯೇ ಆತನನ್ನು ಮುಗಿಸಲು ಶಕೀರಾ ಹೊಂಚು ಹಾಕಿದ್ದಳು.

ಎಂದಿನಂತೆ ಶನಿವಾರ ಸಹ ಕೋಳಿ ಫಾರಂನಲ್ಲಿ ಭೇಟಿಯಾಗಲು ನಿರ್ಧರಿಸಿದ್ದು, ಶಕೀರಾ ಪೆಟ್ರೋಲ್ ಸಮೇತ ಅಲ್ಲಿಗೆ ಬಂದಿದ್ದಾಳೆ. ಅಲ್ಲಿ ಆತನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಆಕೆ ಬಳಿಕ ಅದೇ ಮಂಚಕ್ಕೆ ಆತನನ್ನು ಕಟ್ಟಿ ಬೆಂಕಿ ಹಚ್ಚಿದ್ದಾಳೆ.

ಮುಂಜಾನೆ ಕೆಲಸಕ್ಕೆ ಬಂದ ಕಾರ್ಮಿಕರು ಹತ್ಯೆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಶಕೀರಾ ಸಹ ಪೊಲೀಸ್ ಠಾಣೆಗೆ ಬಂದು ತನ್ನ ಕೃತ್ಯವನ್ನು ಒಪ್ಪಿಕೊಂಡು ಶರಣಾಗಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ