ಆ್ಯಪ್ನಗರ

"ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವವರೆಗೆ ವಿಧಾನಸಭೆ ಎಲೆಕ್ಷನ್‌ಗೆ ಸ್ಪರ್ಧಿಸುವುದಿಲ್ಲ": ಓಮರ್

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ನಾಯಕ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವವರೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ದೃಢ ಸಂಕಲ್ಪ ವ್ಯಕ್ತಪಡಿಸಿದ್ದಾರೆ.

TIMESOFINDIA.COM 27 Jul 2020, 4:06 pm
ಶ್ರೀನಗರ: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿರುವವರೆಗೆ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ನಾಯಕ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ಯನ್ನ ಕೇಂದ್ರ ಸರಕಾರ ರದ್ದುಪಡಿಸಿ ಒಂದು ವರ್ಷವಾಗುತ್ತಿರುವ ಹಿನ್ನೆಲೆ ಆಂಗ್ಲ ಪತ್ರಿಕೆಯೊಂದಕ್ಕೆ ಲೇಖನ ಬರೆದಿರುವ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರ ಹಾಗೂ ಲಡಾಕನ್ನ ಬೇರ್ಪಡಿಸುವ ಮೂಲಕ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
Vijaya Karnataka Web jpg - 2020-07-27T155804.432


ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನ ರದ್ದುಪಡಿಸಿ ಕೇಂದ್ರಾಡಳಿತ ಪ್ರದೇಶವಾಗಿಸಿದ್ದು ಅಚ್ಚರಿಯ ಸಂಗತಿಯೇನು ಆಗಿರಲಿಲ್ಲ ಆದರೆ ಇದು ತಾರತಮ್ಯವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹೀಗಾಗಿ ಜಮ್ಮು- ಕಾಶ್ಮೀರ ಸಂಪೂರ್ಣ ವಿಧಾನಸಭೆಯುಳ್ಳ ರಾಜ್ಯವಾಗುವವರೆಗೆ ನಾನು ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಸ್ಪರ್ಧೆ ಮಾಡಿಲ್ಲದಿದ್ದರೂ ನಾನು ನನ್ನ ಪಕ್ಷ ಕಟ್ಟುವಲ್ಲಿ ಸತತ ನಿರತವಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ ಇದು ಬೆದರಿಕೆ ಅಥವಾ ಬ್ಲಾಕ್‌ಮೇಲ್‌ ಅಲ್ಲ ಎಂದು ಹೇಳಿರುವ ಒಮರ್‌, ಕೇಂದ್ರಾಡಳಿತ ಪ್ರದೇಶವಾಗಿಸಿರುವುದರಿಂದ ಸದ್ಯ ಜಮ್ಮು-ಕಾಶ್ಮೀರ ನಿರುಪಯುಕ್ತ ವಿಧಾನಸಭೆ ಆಗಿದೆ. ಇಂತಹ ವಿಧಾನಸಭೆ ಮುನ್ನಡೆಸಲು ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

"ನನ್ನ ರಾಜಕೀಯ ಜೀವನ ಅಂತ್ಯವಾದರೂ, ನಾನು ಸುಳ್ಳು ಹೇಳುವುದಿಲ್ಲ": ಮೋದಿಗೆ ರಾಹುಲ್‌ ಟಾಂಗ್‌

ಹೆಚ್ಚು ಅಧಿಕಾರ ಹೊಂದಿದ್ದ ಜಮ್ಮು-ಕಾಶ್ಮೀರದ ವಿಧಾನಸಭೆಗೆ ಸದಸ್ಯನಾಗಿದ್ದವನು ಈಗ ಅಧಿಕಾರವೇ ಇಲ್ಲದಂತಾಗಿರುವ ವಿಧಾನಸಭೆಗೆ ಸದಸ್ಯನಾಗುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಸರಕಾರದ ನಿರ್ಧಾರವನ್ನು ಟೀಕಿಸಿದ ಮಾಜಿ ಮುಖ್ಯಮಂತ್ರಿ, ರಾಜ್ಯದ ಜನತೆಯನ್ನು ಶಿಕ್ಷಿಸುವುದಕ್ಕೆ ಅಲ್ಲದೇ ಬೇರಾವ ಕಾರಣದಿಂದಲೂ ಈ ರೀತಿ ಮಾಡಿರಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನ ರದ್ದುಗೊಳಿಸಿ ಇತಿಹಾಸ ನಿರ್ಮಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ