ಆ್ಯಪ್ನಗರ

ಅತ್ಯಾಚಾರ ತಡೆಯಲಾಗದು ಎಂದ ರಾಜಸ್ಥಾನದ ಮಾಜಿ ಸಚಿವ

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸರಫ್‌, ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜಸ್ಥಾನದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಶೇ.87ರಷ್ಟು ಹೆಚ್ಚಿವೆ ಎಂದು ದೂರಿದರು.

PTI 9 Jul 2019, 5:00 am
ಭರತ್‌ಪುರ: ರಾಜಸ್ಥಾನದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಕಾಂಗ್ರೆಸ್‌ ಸರಕಾರದ ಅಸಹಾಯಕತೆ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಮಾಜಿ ಸಚಿವ ಕಾಳಿ ಚರಣ್‌ ಸರಫ್‌, ''ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಬಹುದು, ಆದರೆ ತಡೆಯಲು ಸಾಧ್ಯವಾಗದು,'' ಎಂದಿದ್ದಾರೆ.
Vijaya Karnataka Web images (1)


ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸರಫ್‌, ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜಸ್ಥಾನದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಶೇ.87ರಷ್ಟು ಹೆಚ್ಚಿವೆ ಎಂದು ದೂರಿದರು.

''ಅತ್ಯಾಚಾರ ಪ್ರಕರಣಗಳನ್ನು ತಡೆಯಲಾಗದು, ಆದರೆ ಕಾಂಗ್ರೆಸ್‌ ಆಡಳಿತ ಶುರುವಾದ ಬಳಿಕ ಅಂತಹ ಪ್ರಕರಣಗಳು ಗಣನೀಯವಾಗಿ ಹೆಚ್ಚಿರುವುದು ಕಳವಳಕಾರಿ ಸಂಗತಿ,'' ಎಂದರು. ಕಳೆದ ವಾರವಷ್ಟೇ ಇಲ್ಲಿನ ಶಾಸ್ತ್ರಿನಗರದಲ್ಲಿ ಏಳು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ವರದಿಯಾದ ಬೆನ್ನ ಹಿಂದೆಯೇ ಮಾಜಿ ಸಚಿವರಿಂದ ಈ ಹೇಳಿಕೆ ಹೊರಬಿದ್ದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ