ಆ್ಯಪ್ನಗರ

ದಿಲ್ಲಿಯಲ್ಲಿ ಭಾರೀ ಮಳೆ: ಅಪಾಯದ ಮಟ್ಟ ಮೀರಿದ ಯಮುನಾ ನದಿ

ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಯಮುನಾ ನದಿ ಅಪಾಯದ ಮಟ್ಟ ದಾಟಿದೆ.

Vijaya Karnataka Web 28 Jul 2018, 7:31 pm
ಹೊಸದಿಲ್ಲಿ: ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಧಾನಿಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಯಮುನಾ ನದಿ ಅಪಾಯದ ಮಟ್ಟ ದಾಟಿದೆ.
Vijaya Karnataka Web yamuna_2


ನದಿ ಕಿನಾರೆಯಲ್ಲಿನ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಸ್ಥಳೀಯ ಆಡಳಿತ ಮುಂದಾಗಿದೆ.

ಹಳೆ ರೈಲ್ವೆ ಸೇತುವೆಯ ಬಳಿ ನೀರಿನ ಮಟ್ಟ 205.20 ಮೀಟರ್‌ಗೆ ಏರಿಕೆಯಾಗಿದ್ದು, ಹಾಥಿಕುಂಡ್‌ ಸೇತುವೆ ಬಳಿಯೂ ನದಿ, ಅಪಾಯದ ಮಟ್ಟ ದಾಟಿದೆ. ಶನಿವಾರ ಸಂಜೆ ವೇಳೆಗೆ 5,03,935 ಕ್ಯೂಸೆಕ್‌ ನೀರು ಬಿಡಲಾಗುತ್ತಿದೆ. ನೀರಿನ ಮಟ್ಟ ಮತ್ತಷ್ಟು ಮೇಲೇರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.



ಶುಕ್ರವಾರ ಸಂಜೆಯೇ ದಿಲ್ಲಿ ಸರಕಾರ ಅಪಾಯದ ಮುನ್ಸೂಚನೆ, ಎಚ್ಚರಿಕೆ ನೀಡಿದ್ದು, ಜನರ ಸ್ಥಳಾಂತರಗೊಳಿಸುವ ಕಾರ್ಯ ಆರಂಭಿಸಿದೆ.
ಎಲ್ಲ ಸೆಕ್ಟರ್‌ಗಳ ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಆಯಾ ವಿಭಾಗದಲ್ಲಿನ ಪರಿಸ್ಥಿತಿ ಬಗ್ಗೆ ನಿಗಾ ಇರಿಸಲು ಸೂಚಿಸಲಾಗಿದೆ.

ಮಳೆ, ಪ್ರವಾಹ: ಈ ವರೆಗೆ 5 ರಾಜ್ಯಗಳಲ್ಲಿ 465 ಮಂದಿ ಬಲಿ

ಕಂಟ್ರೋಲ್‌ ರೂಂ ಜತೆಗೆ ಸಂಪರ್ಕದಲ್ಲಿರುವಂತೆಯೂ ತಿಳಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ದಿಲ್ಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ