ಆ್ಯಪ್ನಗರ

ಪೊಲೀಸ್‌ ಠಾಣೆಗೆ ಯೋಗಿ ಆದಿತ್ಯನಾಥ್‌ ದಿಢೀರ್‌ ಭೇಟಿ

ಉ. ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲ್ಲಿನ ಪೊಲೀಸ್‌ ಠಾಣೆಗೆ ಆದಿತ್ಯನಾಥ್‌ ದಿಢೀರ್‌ ಭೇಟಿ.

Vijaya Karnataka Web 23 Mar 2017, 5:47 pm
ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲ್ಲಿನ ಪೊಲೀಸ್‌ ಠಾಣೆಗೆ ದಿಢೀರ್‌ ಭೇಟಿ ನೀಡಿರುವ ಯೋಗಿ ಆದಿತ್ಯನಾಥ್‌, ಇಲಾಖೆಯ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದ್ದಾರೆ.
Vijaya Karnataka Web yogi adityanath pays surprise visit to hazratganj police station
ಪೊಲೀಸ್‌ ಠಾಣೆಗೆ ಯೋಗಿ ಆದಿತ್ಯನಾಥ್‌ ದಿಢೀರ್‌ ಭೇಟಿ


ಹಜರತ್ ಗಂಜ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ಠಾಣೆಯಲ್ಲಿನ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿರುವ ಅವರು, ಠಾಣೆಯ ಕಾರ್ಯ ವೈಖರಿ ಕುರಿತು ತಿಳಿದುಕೊಳ್ಳಲು ಆಗಮಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಉತ್ತಮ ಹಂತಕ್ಕೆ ತರಲಾಗುವುದು, ಕಾನೂನು ಸುವ್ಯವಸ್ಥೆ ಜಾರಿಗೊಳಿಸಲು ಅಗತ್ಯವಿರುವ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸರಕಾರ ಹಿಂಜರಿಯುವುದಿಲ್ಲ ಎಂದು ಆದಿತ್ಯನಾಥ್‌ ಹೇಳಿದ್ದಾರೆ.

ಇದೇ ವೇಳೆ ಸೈಬರ್ ಕ್ರೈಂ ಬ್ರಾಂಚ್ ಸೇರಿದಂತೆ ಪೊಲೀಸ್‌ ಇಲಾಖೆಯ ಕುರಿತು ಸಮಗ್ರ ಮಾಹಿತಿ ಕಲೆ ಹಾಕಿದ ಮುಖ್ಯಮಂತ್ರಿ ಪೊಲೀಸ್‌ ಇಲಾಖೆಯಲ್ಲಿ ಬೆಳವಣಿಗೆಯನ್ನು ಕಾಣುತ್ತೇವೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ