ಆ್ಯಪ್ನಗರ

ರೈತ ಪ್ರತಿಭಟನೆ ಹಿಂದೆ ವಿಪಕ್ಷಗಳ ರಾಮ ಮಂದಿರ ನಿರ್ಮಾಣದ ಸಿಟ್ಟು: ಯೋಗಿ ಆರೋಪ!

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆ ಹಿಂದೆ, ರಾಮ ಮಂದಿರ ನಿರ್ಮಾಣವಾಗುತ್ತಿರುವ ಕಾರಣಕ್ಕೆ ಕೋಪಗೊಂಡಿರುವ ವಿಪಕ್ಷಗಳ ಹುನ್ನಾರ ಅಡಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.

Vijaya Karnataka Web 17 Dec 2020, 8:24 pm
ಬರೇಲಿ: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆ ಹಿಂದೆ, ರಾಮ ಮಂದಿರ ನಿರ್ಮಾಣವಾಗುತ್ತಿರುವ ಕಾರಣಕ್ಕೆ ಕೋಪಗೊಂಡಿರುವ ವಿಪಕ್ಷಗಳ ಹುನ್ನಾರ ಅಡಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web Yogi Adityanath
ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್


ಉತ್ತರಪ್ರದೇಶದ ಬರೇಲಿಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ 'ಕೃಷಿಕ ಸಹೋದರರೊಂದಿಗೆ ಸಂವಾದ' ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ರೈತ ಪ್ರತಿಭಟನೆಯ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ವಿಪಕ್ಷಗಳಲ್ಲಿ ಸಿಟ್ಟು ಮನೆ ಮಾಡಿದೆ. ಈ ಸಿಟ್ಟನ್ನು ರೈತ ಪ್ರತಿಭಟನೆಗೆ ಬೆಂಬಲ ನೀಡುವ ಮೂಲಕ ವಿಪಕ್ಷಗಳು ತೋರಿಸಿಕೊಳ್ಳುತ್ತಿವೆ ಎಂದು ಯೋಗಿ ಆದಿತ್ಯನಾಥ್ ಹರಿಹಾಯ್ದಿದ್ದಾರೆ.

ಕೃಷಿ ಕಾನೂನುಗಳ ಕುರಿತು ರೈತ ಸಮುದಾಯದಲ್ಲಿ ಭಯ ಹುಟ್ಟಿಸಿರುವ ವಿಪಕ್ಷಗಳು, ಅವರನ್ನು ಮುಂದೆ ಬಿಟ್ಟು ತಮ್ಮ ರಾಜಕೀಯ ಲಾಭ ಮಾಡಿಕೊಳ್ಳುತ್ತಿವೆ. ರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಕೋಪಗೊಂಡಿರುವ ವಿಪಕ್ಷಗಳು, ರೈತರನ್ನು ಪ್ರಚೋದಿಸುವ ಮೂಲಕ ತಮ್ಮ ಸಿಟ್ಟಿನ ಪ್ರದರ್ಶನ ಮಾಡುತ್ತಿವೆ ಎಂದು ಯೋಗಿ ಆದಿತ್ಯನಾಥ್ ಕಿಡಿಕಾರಿದರು.

ರೈತರ ದಾರಿ ತಪ್ಪಿಸುತ್ತಿರುವ ಕಾಣದ 'ಕೈ'ಗಳಿಗೆ ಪ್ರಧಾನಿ ಎಚ್ಚರಿಕೆ: ಈ ಆಟ ನಡೆಯದು ಎಂದ ಮೋದಿ!

ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದರೂ ವಿಪಕ್ಷಗಳು ಎಂಎಸ್‌ಪಿ ರದ್ದಾಗಲಿದೆ ಎಂದು ರೈತರಿಗೆ ಸುಳ್ಳು ಹೇಳುತ್ತಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ರೈತ ಪ್ರತಿಭಟನೆಯನ್ನು ಪ್ರಧಾನಿ ಮೋದಿ ನಿಭಾಯಿಸುತ್ತಿರುವ ರೀತಿಯನ್ನು ಮೆಚ್ಚಿಕೊಂಡಿರುವ ಯೋಗಿ ಆದಿತ್ಯನಾಥ್, ನೂತನ ಕೃಷಿ ಕಾನೂನುಗಳು ರೈತ ಸಮುದಾಯಕ್ಕೆ ಹೇಗೆ ಅನುಕೂಲ ಕಲ್ಪಿಸಲಿವೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಧಾನಿ ತುಂಬ ಶ್ರಮಿಸುತ್ತಿದ್ದಾರೆ ಎಂದು ಯೋಗಿ ಅಭಿಪ್ರಾಯಪಟ್ಟಿದ್ದಾರೆ.

ರೈತರ ಪ್ರತಿಭಟನೆ ಮತ್ತೊಂದು ಸಿಎಎ ಹೋರಾಟ ಅಷ್ಟೇ: ಪ್ರತಾಪ್‌ ಸಿಂಹ

ಒಟ್ಟಿನಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳ ಹಿಂದೆ ರಾಮ ಮಂದಿರ ನಿರ್ಮಾಣವಾಗುತ್ತಿರುವ ಕಾರಣಕ್ಕೆ ಸಿಟ್ಟಾಗಿರುವ ವಿಪಕ್ಷಗಳ ಕೈವಾಡ ಇದೆ ಎಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆರೋಪ ತೀವ್ರ ಚರ್ಚೆಗೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ