ಅಮರಾವತಿ:ಕೆಲ ದಿನಗಳ ಹಿಂದೆಯಷ್ಟೇ ತನ್ನ ಸರಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಕಾರಣಕ್ಕೆ ಎರಡು ತೆಲುಗು ವಾಹಿನಿಗಳ ವಿರುದ್ಧ ಅಘೋಷಿತ ವಾಗಿ ತಿರುಗಿ ಬಿದ್ದಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸರಕಾರ ಈಗ ಮಾಧ್ಯಮ ಸ್ವಾತಂತ್ರ್ಯಕ್ಕೆ ಕೊಕ್ಕೆ ಹಾಕಲು ನಿರ್ಧಾರ ಮಾಡಿದೆ.
ಮಾಧ್ಯಮಕ್ಕೆ ನಿರ್ಬಂಧ ಹೇರುವ ಮೂಲಕ ಪಾರದರ್ಶಕತೆಗೆ ಬೆನ್ನು ತೋರಿಸಬೇಡಿ!
ರಾಜ್ಯದ ಅಭಿವೃದ್ಧಿಗೆ ಮಾರಕವಾಗುವ ರೀತಿಯಲ್ಲಿ ಸುದ್ದಿ ಬಿತ್ತರಿಸಿದರೆ ಅಂತಹ ಮಾಧ್ಯಮದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ, ಮಾನನಷ್ಟ ಮೊಕದ್ದಮೆ ಹೂಡಿ ಎಂದು ಇಲಾಖೆಯ ಕಾರ್ಯದರ್ಶಿಗಳಿಗೆ ಸಂಪೂರ್ಣ ಸ್ವಾಂತಂತ್ರ್ಯ ನೀಡಿ ರಾಜ್ಯ ಸಚಿವ ಸಂಪುಟ ಆದೇಶ ಹೊರಡಿಸಿದೆ.
ಮಾಧ್ಯಮ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಹಮತ
ಸಿಎಂ ಜಗನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಾಧ್ಯಮಕ್ಕೆ ಕಡಿವಾಣ ಹಾಕುವ ಬಗೆಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುದ್ರಣ, ಟಿವಿ ಮಾಧ್ಯಮ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ, 24 ಗಂಟೆಯೊಳಗೆ ಕಾನೂನು ಕ್ರಮ ಜರಗಿಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಹೊರಟವರದ್ದು ಅಸಹಾಯಕತೆಯಲ್ಲವೆ?
ಸುಳ್ಳು ಸುದ್ದಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು, ಈ ನಿರ್ಧಾರ ಒಂದು ಉತ್ತಮ ಯೋಜನೆ ಎಂದು ಸಾರ್ವಜನಿಕ ಸಂಪರ್ಕ ಸಚಿವ ಪೆರ್ನಿ ವೆಂಕಟರಾಮಯ್ಯ ಅವರು ಜಗನ್ ಸರಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ.
ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕಕ್ಕೆ ಭಾರತೀಯ ಪತ್ರಿಕಾ ಮಂಡಳಿ ಅಸಮಾಧಾನ
ಈ ಹಿಂದೆ ಜಗನ್ ಅವರ ತಂದೆ, ಮಾಜಿ ಸಿಎಂ, ದಿವಂಗತ ವೈ.ಎಸ್ ರಾಜಶೇಖರ್ ರೆಡ್ಡಿ ಈ ನಿಯಮವನ್ನು ಜಾರಿಗೆ ತಂದಿದ್ದರು. ಆದರೆ ಇದರಲ್ಲಿ ಸಾಮಾಜಿಕ ಜಾಲತಾಣಗಳ ಬಗ್ಗೆ ಉಲ್ಲೇಖಿಸಿರಲಿಲ್ಲ. ಬಳಿಕ ವೈಎಸ್ ಆರ್ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೂ ಬಂದಿರಲಿಲ್ಲ.
ಮಾಧ್ಯಮಕ್ಕೆ ನಿರ್ಬಂಧ ಹೇರುವ ಮೂಲಕ ಪಾರದರ್ಶಕತೆಗೆ ಬೆನ್ನು ತೋರಿಸಬೇಡಿ!
ರಾಜ್ಯದ ಅಭಿವೃದ್ಧಿಗೆ ಮಾರಕವಾಗುವ ರೀತಿಯಲ್ಲಿ ಸುದ್ದಿ ಬಿತ್ತರಿಸಿದರೆ ಅಂತಹ ಮಾಧ್ಯಮದ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ, ಮಾನನಷ್ಟ ಮೊಕದ್ದಮೆ ಹೂಡಿ ಎಂದು ಇಲಾಖೆಯ ಕಾರ್ಯದರ್ಶಿಗಳಿಗೆ ಸಂಪೂರ್ಣ ಸ್ವಾಂತಂತ್ರ್ಯ ನೀಡಿ ರಾಜ್ಯ ಸಚಿವ ಸಂಪುಟ ಆದೇಶ ಹೊರಡಿಸಿದೆ.
ಮಾಧ್ಯಮ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಹಮತ
ಸಿಎಂ ಜಗನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಾಧ್ಯಮಕ್ಕೆ ಕಡಿವಾಣ ಹಾಕುವ ಬಗೆಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮುದ್ರಣ, ಟಿವಿ ಮಾಧ್ಯಮ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ, 24 ಗಂಟೆಯೊಳಗೆ ಕಾನೂನು ಕ್ರಮ ಜರಗಿಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.
ಮಾಧ್ಯಮ ಸ್ವಾತಂತ್ರ್ಯ ಹತ್ತಿಕ್ಕಲು ಹೊರಟವರದ್ದು ಅಸಹಾಯಕತೆಯಲ್ಲವೆ?
ಸುಳ್ಳು ಸುದ್ದಿಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗಿದ್ದು, ಈ ನಿರ್ಧಾರ ಒಂದು ಉತ್ತಮ ಯೋಜನೆ ಎಂದು ಸಾರ್ವಜನಿಕ ಸಂಪರ್ಕ ಸಚಿವ ಪೆರ್ನಿ ವೆಂಕಟರಾಮಯ್ಯ ಅವರು ಜಗನ್ ಸರಕಾರದ ತೀರ್ಮಾನವನ್ನು ಸಮರ್ಥಿಸಿಕೊಂಡಿದ್ದಾರೆ.
ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕಕ್ಕೆ ಭಾರತೀಯ ಪತ್ರಿಕಾ ಮಂಡಳಿ ಅಸಮಾಧಾನ
ಈ ಹಿಂದೆ ಜಗನ್ ಅವರ ತಂದೆ, ಮಾಜಿ ಸಿಎಂ, ದಿವಂಗತ ವೈ.ಎಸ್ ರಾಜಶೇಖರ್ ರೆಡ್ಡಿ ಈ ನಿಯಮವನ್ನು ಜಾರಿಗೆ ತಂದಿದ್ದರು. ಆದರೆ ಇದರಲ್ಲಿ ಸಾಮಾಜಿಕ ಜಾಲತಾಣಗಳ ಬಗ್ಗೆ ಉಲ್ಲೇಖಿಸಿರಲಿಲ್ಲ. ಬಳಿಕ ವೈಎಸ್ ಆರ್ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೂ ಬಂದಿರಲಿಲ್ಲ.