ಆ್ಯಪ್ನಗರ

ಆಂಧ್ರ ಪ್ರದೇಶ: ವೈಎಸ್ಸಾರ್‌ಸಿಪಿ-ಟಿಡಿಪಿ ಘರ್ಷಣೆ, ಒಬ್ಬ ಸಾವು, ನಾಲ್ವರಿಗೆ ಗಾಯ

'ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದ್ದು, ಐಪಿಸಿ 302 ಮತ್ತು 307ರ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ' ಎಂದು ಗ್ರಾಮೀಣ ಸರ್ಕಲ್ ಇನ್ಸ್‌ಪೆಕ್ಟರ್ ಧರ್ಮಾವರಂ ಸುದ್ದಿಸಂಸ್ಥೆಗೆ ತಿಳಿಸಿದರು.

Times Now 1 Jun 2019, 7:11 pm
ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ತೀವ್ರ ಹಣಾಹಣಿಯ ಬಳಿಕ ಇದೀಗ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಆಡಳಿತಾರೂಢ ವೈಎಸ್ಸಾರ್ ಕಾಂಗ್ರೆಸ್ ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಬೀದಿ ಕಾಳಗ ನಡೆದಿದ್ದು ಒಬ್ಬ ವ್ಯಕ್ತಿ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.
Vijaya Karnataka Web YSRCP-TDP Clashes


ಅನಂತಪುರ ಜಿಲ್ಲೆಯ ಬಾತಲಪಲ್ಲಿ ಮಂಡಲದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಹಿಂಸಾಚಾರಕ್ಕಿಳಿದಾಗ ಈ ಘಟನೆ ಸಂಭವಿಸಿದೆ.

'ಘರ್ಷಣೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದ್ದು, ಐಪಿಸಿ 302 ಮತ್ತು 307ರ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ' ಎಂದು ಗ್ರಾಮೀಣ ಸರ್ಕಲ್ ಇನ್ಸ್‌ಪೆಕ್ಟರ್ ಧರ್ಮಾವರಂ ಸುದ್ದಿಸಂಸ್ಥೆಗೆ ತಿಳಿಸಿದರು.


ಚುನಾವಣೆ ವೇಳೆಯೂ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಹಲವು ಬಾರಿ ಘರ್ಷಣೆಗಳು ಸಂಭವಿಸಿವೆ. ಮೊದಲ ಹಂತದ ಚುನಾವಣೆ ವೇಳೆಯ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

ಲೋಕಸಭಾ ಚುನಾವಣೆಯಲ್ಲಿ ವೈಎಸ್ಸಾರ್‌ಪಿ 23 ಕ್ಷೇತ್ರಗಳನ್ನು ಗೆದ್ದಿದ್ದರೆ ಟಿಡಿಪಿ ಕೇವಲ 2 ಸೀಟುಗಳನ್ನು ಗೆದ್ದಿತ್ತು. ವಿಧಾನಸಭೆ ಚುನಾವಣೆಯಲ್ಲಿ ವೈಎಸ್ಸಾರ್‌ಸಿಪಿ 151 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿದೆ. ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ