ಆ್ಯಪ್ನಗರ

ಇಂಡಿಗೋ ವಿಮಾನದಲ್ಲಿ ಮತ್ತೊಂದು ಬಾಂಬ್ ಪತ್ತೆ ಶಂಕೆ: ತುರ್ತು ವಿಮಾನ ಭೂಸ್ಪರ್ಶ

ಮಂಗಳೂರಿನಲ್ಲಿ ಸೋಮವಾರ (ಜನವರಿ 20) ಬೆಳಗ್ಗೆಯಿಂದಲೇ ಪೊಲೀಸರು ಸಖತ್‌ ಬ್ಯುಸಿಯಾಗಿದ್ದರು. ಮೊದಲಿಗೆ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಬೆನ್ನಲ್ಲೇ ಬೆದರಿಕೆ ದೂರವಾಣಿ ಕರೆಯೊಂದು ಬಂದಿದ್ದು ಆತಂಕ ಮೂಡಿಸಿತು.

Vijaya Karnataka Web 20 Jan 2020, 5:06 pm
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ತನಿಖೆ ಮುಂದುವರಿಯುತ್ತಿರುವಾಗಲೇ ಮತ್ತೊಂದು ವಿಮಾನದಲ್ಲಿ ಬಾಂಬ್‌ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
Vijaya Karnataka Web ಮಂಗಳೂರು ವಿಮಾನ ನಿಲ್ದಾಣ
ಮಂಗಳೂರು ವಿಮಾನ ನಿಲ್ದಾಣ


ಮಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್‌ ಇದೆ ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ತುರ್ತು ಭೂ ಸ್ಪರ್ಶ ಮಾಡಿತು.

ಆಗಷ್ಟೇ ಟೇಕಾಫ್‌ ಆಗಿದ್ದ ವಿಮಾನವನ್ನು ಹಿಂದಕ್ಕೆ ಕರೆಯಿಸಿ ಪ್ರಯಾಣಿಕರನ್ನು ಹಾಗೂ ಲಗೇಜ್‌ಗಳನ್ನು ತೀವ್ರ ತಪಾಸಣೆಗೊಳಪಡಿಸಲಾಯಿತು.

ಆದರೆ ಇದು ಹುಸಿ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ