ಆ್ಯಪ್ನಗರ

ಅಹವಾಲು ಸ್ವೀಕಾರ 13ರಂದು

ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಂದ ಭ್ರಷ್ಟಾಚಾರ ಮತ್ತು ಸರಕಾರಿ ಕಚೇರಿಗಳಲ್ಲಿನ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಲಿದ್ದು, ನ.13ರಂದು ಬೆಳಗ್ಗೆ 11ಕ್ಕೆ ಶಹಾಪುರ ತಾಲೂಕು ಪಂಚಾಯಿತಿ ಸಭಾಭವನ, ನ. 20ರಂದು ಬೆಳಗ್ಗೆ 11 ಕ್ಕೆ ವಡಗೇರಾ ತಹಸೀಲ್ದಾರ್‌ ಕಚೇರಿ ಆವರಣದಲ್ಲಿಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

Vijaya Karnataka 10 Nov 2019, 9:59 pm
ಯಾದಗಿರಿ: ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಂದ ಭ್ರಷ್ಟಾಚಾರ ಮತ್ತು ಸರಕಾರಿ ಕಚೇರಿಗಳಲ್ಲಿನ ಕುಂದುಕೊರತೆಗಳ ಕುರಿತು ಅಹವಾಲು ಸ್ವೀಕರಿಸಲಿದ್ದು, ನ.13ರಂದು ಬೆಳಗ್ಗೆ 11ಕ್ಕೆ ಶಹಾಪುರ ತಾಲೂಕು ಪಂಚಾಯಿತಿ ಸಭಾಭವನ, ನ. 20ರಂದು ಬೆಳಗ್ಗೆ 11 ಕ್ಕೆ ವಡಗೇರಾ ತಹಸೀಲ್ದಾರ್‌ ಕಚೇರಿ ಆವರಣದಲ್ಲಿಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಈ ದಿನಾಂಕಗಳಂದು ಸಂಬಂಧಪಟ್ಟ ತಾಲೂಕಿನ ಎಲ್ಲಾಅಧಿಕಾರಿಗಳು ಉಪಸ್ಥಿತರಿರುವಂತೆ ಪ್ರಕಟಣೆಯಲ್ಲಿತಿಳಿಸಲಾಗಿದೆ.
Vijaya Karnataka Web
ಅಹವಾಲು ಸ್ವೀಕಾರ 13ರಂದು


ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಯಾದಗಿರಿ: ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್‌ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿಖಾಲಿ ಇರುವ 12-ಅಂಗನವಾಡಿ ಕಾರ್ಯಕರ್ತೆ ಮತ್ತು 38-ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ನೇಮಕಾತಿಯ ಮಾರ್ಗಸೂಚಿಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಶಹಾಪುರ ಗಂಜ್‌ ಏರಿಯಾದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸುರಪುರ ಜೈಲ್‌ ಹತ್ತಿರದಲ್ಲಿರುವ ಹಳೆ ಕೋರ್ಟ್‌ ಕಟ್ಟಡದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಯಾದಗಿರಿ ಜಿಲ್ಲಾಆಸ್ಪತ್ರೆ ರಸ್ತೆ ಸ್ತ್ರೀಶಕ್ತಿ ಭವನದ 1ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಗುರುಮಠಕಲ್‌ ಗಾಂಧಿ ಮೈದಾನದ ಹತ್ತಿರವಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗಳಲ್ಲಿಪಟ್ಟಿಯನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ಸೂಕ್ತ ದಾಖಲಾತಿಗಳೊಂದಿಗೆ ನವೆಂಬರ್‌ 16ರ ಸಂಜೆ 5.30 ಗಂಟೆಯವರೆಗೆ ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಯಾದಗಿರಿ: 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್‌ ನಂತರದ ಕೋರ್ಸುಗಳಲ್ಲಿವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನ. 10ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಅ. 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ತಿತಿತಿ.ಞಚಿಡಿhಠಿಚಿ$.ಛಿÃÃ.Ãsñ.ಟಿ ಹಾಗೂ ತಿತಿತಿ.dಚಿಛಿಞತಿಚಿಡಿಜಛಿಟಚಿ$h.ಞಚಿಡಿ.ಟಿಛಿ.ಟಿ ವೆಬ್‌ಸೈಟ್‌ಗಳ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ ನೋಡಬಹುದು. 8050770005, 8050770004 ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ