ಆ್ಯಪ್ನಗರ

ಚಿಂಚೋಳಿ ಅಭಿವೃದ್ಧಿಗೆ 30 ಕೋಟಿ ಅನುದಾನ

ಪ್ರಾಕೃತಿಕವಾಗಿ ಶ್ರೀಮಂತವಾಗಿರುವ ಹಾಗೂ ಹೈಕ ಮಲೆನಾಡು ಎಂದು ಕರೆಸಿಕೊಳ್ಳುವ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಸಚಿವ ಪ್ರಿಯಾಂಕ್‌ ಖರ್ಗೆ 30 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

Vijaya Karnataka 12 Jun 2019, 9:20 pm
ಕಲಬುರಗಿ :ಪ್ರಾಕೃತಿಕವಾಗಿ ಶ್ರೀಮಂತವಾಗಿರುವ ಹಾಗೂ ಹೈಕ ಮಲೆನಾಡು ಎಂದು ಕರೆಸಿಕೊಳ್ಳುವ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಸಚಿವ ಪ್ರಿಯಾಂಕ್‌ ಖರ್ಗೆ 30 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.
Vijaya Karnataka Web 30 crore grant to chincholi development
ಚಿಂಚೋಳಿ ಅಭಿವೃದ್ಧಿಗೆ 30 ಕೋಟಿ ಅನುದಾನ


ಚಿಂಚೋಳಿ ತಾಲೂಕಿನ ಅಭಿವೃದ್ದಿಗಾಗಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡಿರುವ ಸಚಿವರು, ಅಗತ್ಯ ಅನುದಾನ ಬಿಡುಗಡೆ ಕುರಿತು ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದರು. ಸಚಿವರ ಅಭಿವೃದ್ದಿಯ ಕಡೆಗಿನ ತುಡಿತಕ್ಕೆ ಸ್ಪಂದಿಸಿ ಚಿಂಚೋಳಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವ ವಾಗ್ದಾನ ನೀಡಿದ್ದರು.

ಚುನಾವಣಾ ಸಂದರ್ಭದಲ್ಲಿ ಚಿಂಚೋಳಿಗೆ ಭೇಟಿ ನೀಡಿದಾಗ ಸಮಗ್ರ ಅಭಿವೃದ್ಧಿಗೆ ಶೀಘ್ರ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದರು. ನೀಡಿದ ಭರವಸೆಯಂತೆ ಹಾಗೂ ಖರ್ಗೆ ಅವರ ಒತ್ತಾಸೆಯಂತೆ ಚಿಂಚೋಳಿ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಹಂತದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಸ್‌ಸಿ, ಎಸ್‌ ಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ರೂ 30 ಕೋಟಿ ಮಂಜೂರು ಮಾಡಿದ್ದಾರೆ.

ಈ ಅನುದಾನದಲ್ಲಿ ರೂ 20 ಕೋಟಿ ಅನುದಾನವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಗ್ರಾಮೀಣ ಭಾಗದ ಹಾಗೂ ಇನ್ನುಳಿದ ರೂ 10 ಕೋಟಿ ಅನುದಾನವನ್ನು ಪಟ್ಟಣ ಪ್ರದೇಶದ ವ್ಯಾಪ್ತಿಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ವಾಸಿಸುವ ಕಾಲನಿಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್‌ ತಿಳಿಸಿದ್ದಾರೆ.


ಚಿಂಚೋಳಿ ಅಭಿವೃದ್ಧಿಗೆ 30 ಕೋಟಿ ರೂ. ನೀಡಲಾಗಿದೆ. ಈ ಅನುದಾನದಲ್ಲಿ ಸಿಸಿ ರಸ್ತೆ, ಒಳಚರಂಡಿ, ಅಂಗನವಾಡಿ ಕಟ್ಟಡ, ವಿದ್ಯುತ್‌ ಸಂಪರ್ಕ, ಸಂಪರ್ಕ ರಸ್ತೆ, ಕುಡಿಯುವ ನೀರು, ಗಡಿಭಾಗಗಳ ಅಭಿವೃದ್ಧಿ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.

-ಪ್ರಿಯಾಂಕ್‌ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ