ಆ್ಯಪ್ನಗರ

ಜಿ.ಪಂ. ಅಧ್ಯಕ್ಷೆಯ ಆಪ್ತ ಕಾರ್ಯದರ್ಶಿಗೆ ಎಸಿಬಿ ಶಾಕ್

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಮಲಾಜಿ ಅವರ ಆಪ್ತ ಕಾರ್ಯದರ್ಶಿ ದೇವೇಂದ್ರಪ್ಪ ಬಿರಾದಾರ್ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Vijaya Karnataka Web 24 Jul 2018, 12:09 pm
ಕಲಬುರಗಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಮಲಾಜಿ ಅವರ ಆಪ್ತ ಕಾರ್ಯದರ್ಶಿ ದೇವೇಂದ್ರಪ್ಪ ಬಿರಾದಾರ್ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web ACB


ಮಂಗಳವಾರ ಬೆಳ್ಳಂಬೆಳಗ್ಗೆ ಜಯ ನಗರದಲ್ಲಿರುವ ಬಿರಾದಾರ್ ನಿವಾಸ ಸೇರಿದಂತೆ ರಾಮಮಂದಿರ ಬಳಿಯಿರುವ ಮನೆ ಹಾಗೂ ಕಾಂಪ್ಲೆಕ್ಸ್‌ ಮೇಲೆ ಏಕಾಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿರುವ ದೇವೇಂದ್ರಪ್ಪ ಬಿರಾದಾರ್, ಜಿ.ಪಂ. ಅಧ್ಯಕ್ಷರ ಆಪ್ತ ಕಾರ್ಯದರ್ಶಿಯೂ ಆಗಿದ್ದಾರೆ. ಈ ಹಿಂದೆ ಅನೇಕ ಶಾಸಕರ ಆಪ್ತ ಸಹಾಯಕರಾಗಿಯೂ ಇವರು ಕೆಲಸ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ