ಆ್ಯಪ್ನಗರ

ಕೇಂದ್ರ ಸಚಿವ ರೂಪಾಲ ಭೇಟಿ

ನಗರಕ್ಕೆ ಶುಕ್ರವಾರ ಕೇಂದ್ರ ಕೃಷಿ ರಾಜ್ಯಸಚಿವ ಪುರುಷೋತ್ತಮ ರೂಪಾಲ ಅವರು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಹಾನಗರ ಘಟಕ ಅಧ್ಯಕ್ಷ ಹಾಗೂ ಎಂಎಲ್ಸಿ ಬಿ.ಜಿ.ಪಾಟೀಲ್‌ ಹಾಗೂ ಗ್ರಾಮೀಣ ಜಿಲ್ಲಾಧ್ಯಕ್ಷ ದೊಡ್ಡಗೌಡ ಪಾಟೀಲ್‌ ತಿಳಿಸಿದ್ದಾರೆ.

Vijaya Karnataka 22 Feb 2019, 5:44 pm
ಕಲಬುರಗಿ:ನಗರಕ್ಕೆ ಶುಕ್ರವಾರ ಕೇಂದ್ರ ಕೃಷಿ ರಾಜ್ಯಸಚಿವ ಪುರುಷೋತ್ತಮ ರೂಪಾಲ ಅವರು ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮಹಾನಗರ ಘಟಕ ಅಧ್ಯಕ್ಷ ಹಾಗೂ ಎಂಎಲ್ಸಿ ಬಿ.ಜಿ.ಪಾಟೀಲ್‌ ಹಾಗೂ ಗ್ರಾಮೀಣ ಜಿಲ್ಲಾಧ್ಯಕ್ಷ ದೊಡ್ಡಗೌಡ ಪಾಟೀಲ್‌ ತಿಳಿಸಿದ್ದಾರೆ.
Vijaya Karnataka Web at the mature convention of the lok sabha
ಕೇಂದ್ರ ಸಚಿವ ರೂಪಾಲ ಭೇಟಿ


ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸೂಪರ್‌ ಮಾರ್ಕೆಟ್‌ನಲ್ಲಿರುವ ಎಚ್‌ಕೆಸಿಸಿಐ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಂಡಿರುವ ಬೀದರ್‌, ಕಲಬುರಗಿ ಲೋಕಸಭಾ ಕ್ಷೇತ್ರದ 'ಪ್ರಬುದ್ಧರ 'ಗೋಷ್ಠಿಯಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ ಮತ್ತು ಎರಡು ಜಿಲ್ಲೆಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಪ್ರಮುಖರು,ಪ್ರಭಾರಿಗಳು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಗೋಷ್ಠಿ ಕಾರ್ಯಕ್ರಮಕ್ಕೆ ಪ್ರಬುದ್ಧರು,ವ್ಯಾಪಾರಸ್ಥರು, ಸಾಮಾಜಿಕ ಕಾರ್ಯಕರ್ತರು, ನ್ಯಾಯವಾದಿಗಳು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ