ತಲ್ವಾರ್ನಿಂದ ಕೇಕ್ ಕತ್ತರಿಸಿದ ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್
ಜನ್ಮದಿನದಂದು ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ತಾಲೂಕು ಯುವ ಮುಖಂಡ ಹಾಗೂ ಶ್ರೀರಾಮಸೇನೆ ತಾಲೂಕು ಮಾಜಿ ಅಧ್ಯಕ್ಷ ಶರಣು ಕೋಳಕೂರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Vijaya Karnataka 23 Aug 2019, 9:53 pm
ಜೇವರ್ಗಿ :ಜನ್ಮದಿನದಂದು ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸಲು ತಲ್ವಾರ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ತಾಲೂಕು ಯುವ ಮುಖಂಡ ಹಾಗೂ ಶ್ರೀರಾಮಸೇನೆ ತಾಲೂಕು ಮಾಜಿ ಅಧ್ಯಕ್ಷ ಶರಣು ಕೋಳಕೂರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲತ್ವಾರ್ನಿಂದ ಕೇಕ್ ಕತ್ತರಿಸಿ, ಸ್ನೇಹಿತರೊಂದಿಗೆ ಫೋಸ್ ನೀಡಿರುವುದಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಮಾಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ ಎಂಬ ಆರೋಪದಡಿ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲತ್ವಾರ್ನಿಂದ ಕೇಕ್ ಕತ್ತರಿಸಿ, ಸ್ನೇಹಿತರೊಂದಿಗೆ ಫೋಸ್ ನೀಡಿರುವುದಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ಮಾಡಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ ಎಂಬ ಆರೋಪದಡಿ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.