ಆ್ಯಪ್ನಗರ

ತೊಗರಿ ಖರೀದಿ ಇಂದಿನಿಂದ ಸ್ಥಗಿತ

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ 2017-18ನೇ ಸಾಲಿಗೆ ರೈತರಿಂದ ಖರೀದಿಸಲಾಗುತ್ತಿರುವ ತೊಗರಿಯನ್ನು ಫೆ.8ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ತಿಳಿಸಿದ್ದಾರೆ.

Vijaya Karnataka 8 Feb 2018, 4:40 pm
ಕಲಬುರಗಿ: ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ 2017-18ನೇ ಸಾಲಿಗೆ ರೈತರಿಂದ ಖರೀದಿಸಲಾಗುತ್ತಿರುವ ತೊಗರಿಯನ್ನು ಫೆ.8ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ ತಿಳಿಸಿದ್ದಾರೆ.
Vijaya Karnataka Web bread purchases break from today
ತೊಗರಿ ಖರೀದಿ ಇಂದಿನಿಂದ ಸ್ಥಗಿತ


2017-18ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆಯೊಂದಿಗೆ 1,65,750 ಮೆಟ್ರಿಕ್‌ ಟನ್‌ ಗರಿಷ್ಠ ಪ್ರಮಾಣದ ತೊಗರಿ ಉತ್ಪನ್ನ ಖರೀದಿಸಲು ಅನುಮೋದನೆ ನೀಡಲಾಗಿದ್ದು, ಈಗಾಗಲೇ ಈ ಪ್ರಮಾಣದ ತೊಗರಿಯನ್ನು ಖರೀದಿ ಮಾಡಲಾಗಿರುತ್ತದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 6.69 ಲಕ್ಷ ಕ್ವಿಂಟಾಲ್‌ ತೊಗರಿಯನ್ನು ಬೆಂಬಲ ಬೆಲೆ ನೀಡಿ ರೈತರಿಂದ ಖರೀದಿಸಲಾಗಿದೆ.

ಬಾಕಿ ಉಳಿದಿರುವ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ತೊಗರಿಯನ್ನು ಖರೀದಿಸಲು ಅವಶ್ಯವಿರುವ ಪ್ರಮಾಣವನ್ನು ಹೆಚ್ಚಿಸುವ ಕಾರ್ಯ ಪ್ರಗತಿಯಲ್ಲಿರುವುದರಿಂದ ಸರಕಾರದ ಆದೇಶದಂತೆ ಖರೀದಿ ಪ್ರಕ್ರಿಯೆ ತಡೆಹಿಡಿಯಲಾಗಿದೆ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.2017-18ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆಯೊಂದಿಗೆ 1,65,750 ಮೆಟ್ರಿಕ್‌ ಟನ್‌ ಗರಿಷ್ಠ ಪ್ರಮಾಣದ ತೊಗರಿ ಉತ್ಪನ್ನ ಖರೀದಿಸಲು ಅನುಮೋದನೆ ನೀಡಲಾಗಿದ್ದು, ಈಗಾಗಲೇ ಈ ಪ್ರಮಾಣದ ತೊಗರಿಯನ್ನು ಖರೀದಿ ಮಾಡಲಾಗಿರುತ್ತದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 6.69 ಲಕ್ಷ ಕ್ವಿಂಟಾಲ್‌ ತೊಗರಿಯನ್ನು ಬೆಂಬಲ ಬೆಲೆ ನೀಡಿ ರೈತರಿಂದ ಖರೀದಿಸಲಾಗಿದೆ.ಬಾಕಿ ಉಳಿದಿರುವ ರೈತರಿಂದ ಬೆಂಬಲ ಬೆಲೆ ಯೋಜನೆಯಡಿ ತೊಗರಿಯನ್ನು ಖರೀದಿಸಲು ಅವಶ್ಯವಿರುವ ಪ್ರಮಾಣವನ್ನು ಹೆಚ್ಚಿಸುವ ಕಾರ್ಯ ಪ್ರಗತಿಯಲ್ಲಿರುವುದರಿಂದ ಸರಕಾರದ ಆದೇಶದಂತೆ ಖರೀದಿ ಪ್ರಕ್ರಿಯೆ ತಡೆಹಿಡಿಯಲಾಗಿದೆ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ