ಆ್ಯಪ್ನಗರ

ಕಲಬುರಗಿಯಲ್ಲಿ ರೆಡ್‌ ಅಲರ್ಟ್‌: 48 ಕಾಳಜಿ ಕೇಂದ್ರ ಸ್ಥಾಪನೆ, ಸುರಿಯುತ್ತಲೇ ಇದೆ ಮಳೆ!

ಅನೇಕ ನಿರಾಶ್ರಿತರಾಗಿದ್ದು ಅವರಿಗೆ ಕಾಳಜಿ ಕೇಂದ್ರದಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಕಲಬುರಗಿ, ಕಮಲಾಪೂರ ಹಾಗೂ ಅಫಜಲಾಪುರದಲ್ಲಿ ತಲಾ ಮೂರು, ಆಳಂದ ತಾಲೂಕಿನಲ್ಲಿ 4, ಚಿಂಚೋಳಿಯಲ್ಲಿ 12, ಕಾಳಗಿ ತಾಲೂಕಿನಲ್ಲಿ 8 ಹೀಗೆ ಜಿಲ್ಲೆಯಾದ್ಯಂತ ಒಟ್ಟು 48 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನು ಇದರಲ್ಲಿ 4819 ಮಂದಿ ಸದ್ಯ ನಿರಾಶ್ರಿತರಿಗೆ ವಾಸ್ತವ್ಯ ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ.

Vijaya Karnataka Web 15 Oct 2020, 2:37 pm
ಕಲಬುರಗಿ: ಕುಂಭದ್ರೋಣ ಮಳೆ ಕಲಬುರಗಿ ಜಿಲ್ಲೆಯಲ್ಲಿಯು ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಮಳೆಗೆ ಮನೆಗಳು ಧರೆಗುರುಳಿವೆ. ಹಳ್ಳ-ಕೊಳ್ಳಗಳು ತುಂಬಿ ಸಮಸ್ಯೆ ಸೃಷ್ಟಿಯಾಗಿದೆ. ತೋಟ-ಗದ್ದೆಗಳಿಗೂ ನೀರು ಹರಿದು ರೈತ ಕಂಗಾಲಾಗಿ ಹೋಗಿದ್ದಾನೆ.
Vijaya Karnataka Web EkRmv6TU4AAiEyR


ಇದೀಗ ಅನೇಕ ನಿರಾಶ್ರಿತರಾಗಿದ್ದು ಅವರಿಗೆ ಕಾಳಜಿ ಕೇಂದ್ರದಲ್ಲಿ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಕಲಬುರಗಿ, ಕಮಲಾಪೂರ ಹಾಗೂ ಅಫಜಲಾಪುರದಲ್ಲಿ ತಲಾ ಮೂರು, ಆಳಂದ ತಾಲೂಕಿನಲ್ಲಿ 4, ಚಿಂಚೋಳಿಯಲ್ಲಿ 12, ಕಾಳಗಿ ತಾಲೂಕಿನಲ್ಲಿ 8 ಹೀಗೆ ಜಿಲ್ಲೆಯಾದ್ಯಂತ ಒಟ್ಟು 48 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇನ್ನು ಇದರಲ್ಲಿ 4819 ಮಂದಿ ಸದ್ಯ ನಿರಾಶ್ರಿತರಿಗೆ ವಾಸ್ತವ್ಯ ಹಾಗೂ ಆಹಾರದ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ನಡುಗಡ್ಡೆಗಳಾದ ಗ್ರಾಮದ ಸುಮಾರು 77 ಮಂದಿಯನ್ನು ಎನ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇನ್ನು ಕಲಬುರಗಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಜಿಲ್ಲೆಯಲ್ಲಿ ಶುಕ್ರವಾರ ಕೂಡ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ನದಿ ತೀರದಲ್ಲಿರುವ ನಿವಾಸಿಗಳನ್ನು ಕಾಳಜಿ ಕೇಂದ್ರಗಳಿಗೆ ಕಳುಹಿಸಿಕೊಡಲಾಗಿದೆ.

ಕಲಬುರಗಿ: ಸತತ 10 ಗಂಟೆಗಳಿಂದ ಮಳೆರಾಯನ ಅಬ್ಬರ, ಜನಜೀವನ ಅಸ್ತವ್ಯಸ್ತ; ಹಲವೆಡೆ ಸಂಪರ್ಕ ಕಡಿತ!

ನೆರೆಗೆ ಕಾರಣವೇನು?
ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 1 ಲಕ್ಷದ 98 ಸಾವಿರ ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 2 ಲಕ್ಷದ 23 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ.

ಹೀಗಾಗಿ ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪೂರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನದಿ ಪಾತ್ರದ ಜನರಿಗೆ ಇದರಿಂದ ಸಮಸ್ಯೆಯಾಗುತ್ತಿದೆ. ಹೀಗಾಗಿ ನದಿ ದಂಡೆಗೆ ತೆರಳದಂತೆ ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ