ಆ್ಯಪ್ನಗರ

ವಂಚಿಸಿದ ಪ್ರೇಮಿ ಜೇಲಿಗೆ; ಯುವತಿ ಆತ್ಮಹತ್ಯೆ

ಪ್ರೀತಿಸುವ ನಂಬಿಕೆ ಹುಟ್ಟಿಸಿ ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಯುವತಿ, ಯುವಕನ ಸಂಬಂಧಿಕರ ಕಿರುಕುಳ ಸಹಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಿರನೂರ ಗ್ರಾಮದಲ್ಲಿ ನಡೆದಿದೆ.

Vijaya Karnataka 26 Jun 2018, 5:12 pm
ಕಲಬುರಗಿ : ಪ್ರೀತಿಸುವ ನಂಬಿಕೆ ಹುಟ್ಟಿಸಿ ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಯುವತಿ, ಯುವಕನ ಸಂಬಂಧಿಕರ ಕಿರುಕುಳ ಸಹಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಿರನೂರ ಗ್ರಾಮದಲ್ಲಿ ನಡೆದಿದೆ.
Vijaya Karnataka Web cheated lover jacket the girl committed suicide
ವಂಚಿಸಿದ ಪ್ರೇಮಿ ಜೇಲಿಗೆ; ಯುವತಿ ಆತ್ಮಹತ್ಯೆ


ಕವಿತಾ (19) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಈಕೆ ತನ್ನದೇ ಬಡಾವಣೆಯ ಅಂಬಯ್ಯ ಎಂಬಾತನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದೆ. ಹೀಗಾಗಿ, ಆಕೆಯನ್ನು ಪುಸಲಾಯಿಸುವಲ್ಲಿ ಅಂಬಯ್ಯ ಯಶಸ್ವಿಯಾಗಿದ್ದ. ಮದುವೆ ನಿರಾಕರಿಸಿದ ಕೂಡಲೆ ಕವಿತಾ ಫರಹತಾಬಾದ್‌ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು. ಪ್ರಕರಣದ ಬೆನ್ನಲ್ಲೇ ಆತನನ್ನು ಪೊಲೀಸರು ಜೇಲಿಗೆ ಕಳುಹಿಸಿದ್ದರು. ಈ ಮಧ್ಯೆ, ಯುವಕನ ಸಂಬಂಧಿಕರು ಕವಿತಾಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.

ಇದರಿಂದ ಬೇಸತ್ತ ಕವಿತಾ ತನ್ನ ಅಜ್ಜನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯುವತಿಯ ಅಸಹಜ ಸಾವಿನ ಕುರಿತು ಫರಹತಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ