ಆ್ಯಪ್ನಗರ

ಸಿಎಂ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್‌ ಶಾಸಕರು ರಾಜೀನಾಮೆ

ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್‌ ಶಾಸಕರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆಡಳಿತಕ್ಕೆ ಬೇಸತ್ತು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುತ್ತಿದ್ದಾರೆ ಎಂದು ಸುರಪುರ ಶಾಸಕ ನರಸಿಂಹನಾಯಕ ಹೇಳಿದರು.

Vijaya Karnataka 2 Jul 2019, 5:00 am
ಯಾದಗಿರಿ:ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್‌ ಶಾಸಕರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಆಡಳಿತಕ್ಕೆ ಬೇಸತ್ತು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುತ್ತಿದ್ದಾರೆ ಎಂದು ಸುರಪುರ ಶಾಸಕ ನರಸಿಂಹನಾಯಕ ಹೇಳಿದರು.
Vijaya Karnataka Web congress legislators resign from cms resignation
ಸಿಎಂ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್‌ ಶಾಸಕರು ರಾಜೀನಾಮೆ


ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಮತ್ತು ಅವರ ಸಹೋದರ ಆಗಿರುವ ಸಚಿವ ಎಚ್‌.ಡಿ. ರೇವಣ್ಣಗೆ ಮಾತ್ರ ಸರಕಾರ ಬೇಕಾಗಿದೆ. ಉಳಿದವರಿಗೆ ಇದು ತೀವ್ರ ಬೇಸರ ಉಂಟು ಮಾಡಿದೆ ಎಂದರು.

ಸಿಎಂಗೆ ಅಧಿಕಾರ ನಡೆಸಲು ಸರಿಯಾಗಿ ಬರುತ್ತಿಲ್ಲ. ಈ ಸರಕಾರ ಸಂಪೂರ್ಣವಾಗಿ ಕೋಮಾ ಸ್ಥಿತಿಯಲ್ಲಿದೆ. ಆಕ್ಸಿಜನ್‌ ತೆಗೆದರೆ ಸರಕಾರ ತಾನಾಗಿಯೇ ಬೀಳುತ್ತದೆ ಎಂದು ಹೇಳಿದರು.

ಶಾಸಕರಾದ ಆನಂದಸಿಂಗ್‌ ಮತ್ತು ರಮೇಶ್‌ ಜಾರಕಿಹೊಳಿ ಕೆಲ ದಿನಗಳ ಹಿಂದೆ ನನ್ನ ಜತೆ ಮಾತನಾಡಿ, ಜಿಂದಾಲ್‌ಗೆ ಜಮೀನು ನೀಡಿದ ಬಗ್ಗೆ ಚರ್ಚಿಸಿದ್ದರು. ಜಾರಕಿಹೊಳಿಗೆ ಮೈತ್ರಿ ಸರಕಾರದಲ್ಲಿ ಅಸಮಾಧಾನ ಇದ್ದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದರು. ವಿಜಯನಗರ ಕ್ಷೇತ್ರ ಜಿಲ್ಲೆ ಮಾಡದ್ದಕ್ಕೆ ಹಾಗೂ ಜಿಂದಾಲ್‌ ಕಂಪನಿಗೆ ಭೂಮಿ ನೀಡಲು ಸರಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಶಾಸಕ ಆನಂದಸಿಂಗ್‌ ಬೇಸರಗೊಂಡಿದ್ದಾರೆ. ಹೀಗಾಗಿ ಸ್ವಯಂ ಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ