ಆ್ಯಪ್ನಗರ

ವಿಧಾನ ಪರಿಷತ್ ಚುನಾವಣೆ ಬಳಿಕ ಕಾಂಗ್ರೆಸ್ ಮತ್ತಷ್ಟು ದುರ್ಬಲ: ಈಶ್ವರಪ್ಪ ಭವಿಷ್ಯ

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ರಿಂದ 16 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆ.ಎಸ್‌. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದು, ಪರಿಷತ್ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ದುರ್ಬಲವಾಗಲಿದೆ. ಜೆಡಿಎಸ್‌ಗಿಂತಲೂ‌ ಕಡಿಮೆ ಸ್ಥಾನ ಪಡೆಯಲಿದೆ ಎಂದು ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

Vijaya Karnataka Web 30 Nov 2021, 2:38 pm
ಕಲಬುರಗಿ: ವಿಧಾನ ಪರಿಷತ್ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ದುರ್ಬಲವಾಗಲಿದೆ. ಎಷ್ಟು ದುರ್ಬಲವಾಗಲಿದೆ ಎಂದರೆ ಜೆಡಿಎಸ್‌ಗಿಂತಲೂ‌ ಕಡಿಮೆ ಸ್ಥಾನ ಪಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದರು.
Vijaya Karnataka Web K S Eshwarappa


ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ರಿಂದ 16 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್‌ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್‌ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಏನನ್ನು ಹೇಳಲು ಹೊರಟಿದೆ ಎಂಬುದೇ ಗೊತ್ತಾಗುತ್ತಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಲವು ‌ಅಭ್ಯರ್ಥಿಗಳು ಯಾರಿಗೂ ಗೊತ್ತಿಲ್ಲ ಎಂದು ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು.

ನಳಿನ್ ಕುಮಾರ್ ಕಟೀಲ್ ಕುರಿತಾಗಿ ವಿವಾದಾತ್ಮಕ ಹೇಳಿಕೆ ; ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಹುದೊಡ್ಡ ಮೋಸಗಾರ. ಸ್ಥಾನಮಾನ ಸಿಗದಿದ್ದರೆ ಕಾಂಗ್ರೆಸ್‌ನಲ್ಲಿಯೂ ಇರುವುದಿಲ್ಲ. ಜೆಡಿಎಸ್‌ಗೆ ಮೋಸ ಮಾಡಿ ಬಂದಿದ್ದಾರೆ. ಮುಂದೆ ಅವರಿಗೆ ಸ್ಥಾನ ನೀಡದಿದ್ದರೆ ಮತ್ತೆ ಪಕ್ಷ ಬದಲಾಯಿಸುತ್ತಾರೆ ಎಂದರು.

ಸಿದ್ದರಾಮಯ್ಯ ಅವರಂತಹ ದೊಡ್ಡ ಜಾತಿವಾದಿ ಯಾರೂ ಇಲ್ಲ. ಕಳೆದ ಬಾರಿ ವೀರಶೈವ - ಲಿಂಗಾಯತರ ಮಧ್ಯೆ ಒಡಕುಂಟು ಮಾಡಿ ಜಗಳ ಹಚ್ಚಿ ಧರ್ಮ ಒಡೆಯಲು ನೋಡಿದರು. ನಳಿನ್ ಕುಮಾರ್ ಕಟೀಲ್ ಅವರಂತಹ ಸಜ್ಜನ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಕರೆಯುತ್ತಾರೆ. ಜೊತೆಗೆ ಜಮೀರ್ ಅಹ್ಮದ್ ಖಾನ್‌ ಅಂಥವರನ್ನು ಜೊತೆಯಲ್ಲಿಟ್ಟುಕೊಳ್ಳುತ್ತಾರೆ. ಶ್ರೀಮಂತ ಕುಳಗಳನ್ನು ಆರಿಸಿ ಟಿಕೆಟ್ ಕೊಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಪೆದ್ದ ಎನ್ನುತ್ತಾರೆ. ಅವರಿಗೆ ಪೆದ್ದ ಎನ್ನಬೇಕೇ, ದಡ್ಡ ಎನ್ನಬೇಕೇ ಎಂದು ಪ್ರಶ್ನಿಸಿದರು.

ರಾಜ್ಯದ ಜನ ಸುಶಿಕ್ಷಿತರು, ಎಚ್ಚರಿಕೆ ಉಳ್ಳವರಾಗಿದ್ದು, ಕೋವಿಡ್ ನಿಂದ ರಕ್ಷಣೆ ಪಡೆಯಲು ‌ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಾರೆ. ಹಾಗಾಗಿ ಈ ಬಾರಿ ಲಾಕ್‌ಡೌನ್‌ನ ಅಗತ್ಯ ಬೀಳಲಿಕ್ಕಿಲ್ಲ ಎಂದು ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ