ಆ್ಯಪ್ನಗರ

ಸಂವಿಧಾನ ಬದಲಾವಣೆ ಮಾತು ಸರಿಯಲ್ಲ: ಶಿವರಾಜ ಪಾಟೀಲ್

ಸಂವಿಧಾನದಲ್ಲಿ ಕೆಲವು ಅಂಶಗಳನ್ನು ಚಚೆ೯ಗೆ ಒಳಪಡಿಸಿ ತಿದ್ದುಪಡಿ ಮಾಡಬಹುದೇ ಹೊರತು ಸಂವಿಧಾನವನ್ನು ಬದಲಾಯಿಸುವ ಮಾತು ಆಡುವುದು ಸರಿಯಲ್ಲಎಂದು ಲೋಕಸಭೆಯ ಮಾಜಿ ಸ್ಪೀಕರ್ ಹಾಗೂ ಮಾಜಿ ಗೃಹ ಸಚಿವ ಶಿವರಾಜ ಪಾಟೀಲ್ ಹೇಳಿದ್ದಾರೆ.

Vijaya Karnataka Web 27 Jan 2018, 2:17 pm
ಕಲಬುರಗಿ: ಸಂವಿಧಾನದಲ್ಲಿ ಕೆಲವು ಅಂಶಗಳನ್ನು ಚಚೆ೯ಗೆ ಒಳಪಡಿಸಿ ತಿದ್ದುಪಡಿ ಮಾಡಬಹುದೇ ಹೊರತು ಸಂವಿಧಾನವನ್ನು ಬದಲಾಯಿಸುವ ಮಾತು ಆಡುವುದು ಸರಿಯಲ್ಲಎಂದು ಲೋಕಸಭೆಯ ಮಾಜಿ ಸ್ಪೀಕರ್ ಹಾಗೂ ಮಾಜಿ ಗೃಹ ಸಚಿವ ಶಿವರಾಜ ಪಾಟೀಲ್ ಹೇಳಿದ್ದಾರೆ.
Vijaya Karnataka Web constitution cannot be changed said shivaraj patil
ಸಂವಿಧಾನ ಬದಲಾವಣೆ ಮಾತು ಸರಿಯಲ್ಲ: ಶಿವರಾಜ ಪಾಟೀಲ್


ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೇ ನೂರಕ್ಕೂ ಹೆಚ್ಚು ಬಾರಿ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಈ ಎಲ್ಲ ತಿದ್ದುಪಡಿಗಳ ಸಂದರ್ಭದಲ್ಲಿ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತರುವ ಯತ್ನ ಮಾಡಿಲ್ಲ.ಈ ನಿಟ್ಟಿನಲ್ಲಿ ಸುಪ್ರಿಂಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ.

ಇತ್ತೀಚೆಗೆ ಕೆಲವರು ಸಂವಿಧಾನದ ಪರಿವಿಡಿಯಲ್ಲಿ ಸೆಕ್ಯುಲರ್ ಪದ ಕೈಬಿಡುವಂತೆಯೂ ವಾದಿಸುತ್ತಿದ್ದಾರೆ. ಇದು ಅಸಾಧ್ಯದ ಮಾತು. ಸಂವಿಧಾನದ ಆಶಯದ ರಕ್ಷಣೆ ಎಲ್ಲರ ಹೊಣೆ. ಈ ದಿಸೆಯಲ್ಲಿ ನಡೆಯುತ್ತಿರುವ ಹೋರಾಟವನ್ನು ಪ್ರಧಾನಿ ಮೋದಿ ವಿರುದ್ಧದ ಹೋರಾಟ ಎಂದು ಬಿಂಬಿಸುವುದು ಸರಿಯಲ್ಲ. ಯಾರೇ ಸಂವಿಧಾನದ ವಿರುದ್ಧ ಮಾತನಾಡಿದರೂ, ಅಂತಹ ಹೇಳಿಕೆಯ ವಿರುದ್ಧ ಪ್ರತಿಭಟಿಸುವುದು ದೇಶದ ಪ್ರತಿ ಪ್ರಜ್ಞಾವಂತನ ಕರ್ತವ್ಯ ಎಂದರು.

ತ್ರಿವಳಿ ತಲಾಕ್ ನಿಷೇಧ ಒಳ್ಳೆಯದು. ಆದರೆ ತಲಾಕ್ ನೀಡಿದ ವ್ಯಕ್ತಿಯನ್ನು ಮೂರು ತಿಂಗಳು ಜೈಲಿಗೆ ಕಳುಹಿಸಿದರೆ ತಲಾಕ್ ಎದುರಿಸುವ ಮಹಿಳೆ ಮತ್ತು ಆಕೆಯ ಮಕ್ಕಳ ಗತಿ ಏನಾಗಬೇಕು, ಅನಗತ್ಯವಾಗಿ ಸಿವಿಲ್ ವಿಷಯವನ್ನು ಕ್ರಿಮಿನಲ್ ಪ್ರಕರಣದ ವ್ಯಾಪ್ತಿಗೆ ತರಲು ಹೊರಟಿರುವುದು ತಪ್ಪು. ಇಷ್ಟಕ್ಕೂ ಇದನ್ನು ಪರಿಶೀಲನಾ ಸಮಿತಿ ಎದುರು ಚರ್ಚೆಗೆ ಒಳಪಡಿಸಲು ಕೇಂದ್ರ ಸರಕಾರ ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಹೆಚ್ಚಿನ ಧರ್ಮಗಳ ಸೃಷ್ಟಿ ಅಗತ್ಯವಿಲ್ಲ ಎಂದು ಲಿಂಗಾಯತ ಧರ್ಮದ ಸ್ಥಾಪನೆ ಕುರಿತು ಒಂದೇ ಮಾತಿನಲ್ಲಿ ಪ್ರತಿಕ್ರಿಯಿಸಿದರು. ಈ ವಿಷಯದಲ್ಲಿ ನಾನು ಜಡ್ಜ್ ಆಗಲು ಇಚ್ಛಿಸುವುದಿಲ್ಲ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ