ಆ್ಯಪ್ನಗರ

ಭೀಕರ ಅಪಘಾತ: ಮದುವೆಗೆ ಹೊರಟ ಐವರು ಮಸಣಕ್ಕೆ

ಡಿಸೇಲ್ ಟ್ಯಾಂಕರ್ ಹಾಗೂ ಕ್ರೂಸರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಅವರಾದ ಬಳಿಯ ಬೀದರ-ಬೆಂಗಳೂರ ಹೆದ್ದಾರಿಯಲ್ಲಿ ನಡೆದಿದೆ.

Vijaya Karnataka Web 21 Nov 2017, 4:17 pm
ಕಲಬುರಗಿ: ಡಿಸೇಲ್ ಟ್ಯಾಂಕರ್ ಹಾಗೂ ಕ್ರೂಸರ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲೂಕಿನ ಅವರಾದ ಬಳಿಯ ಬೀದರ-ಬೆಂಗಳೂರ ಹೆದ್ದಾರಿಯಲ್ಲಿ ನಡೆದಿದೆ.
Vijaya Karnataka Web deadly accident in kalburgi
ಭೀಕರ ಅಪಘಾತ: ಮದುವೆಗೆ ಹೊರಟ ಐವರು ಮಸಣಕ್ಕೆ


ಕ್ರೂಸರ್‌ನಲ್ಲಿ ಮದುವೆ ಕಾರ್ಯಕ್ರಮವೊಂದಕ್ಕೆ ತೆರಳುತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಉಜ್ವಲ್ (12), ಸೋಮನಾಥ (30) ವೀರಭದ್ರ(60) ಸೇರಿದಂತೆ ಮೃತ ದುರ್ದೈವಿಗಳು. ಇನ್ನೂ ಇಬ್ಬರ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ತೀವ್ರ ಗಾಯಗೊಂಡ ಐದು ಜನರನ್ನು ಕಲಬುರಗಿ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಮಹಾರಾಷ್ಟ್ರ ಮೂಲದವರು ಎನ್ನಲಾಗುತ್ತಿದೆ. ಕಲಬುರ್ಗಿ ಮಾರ್ಗವಾಗಿ ಬೀದರ್‌ನಲ್ಲಿ ಆಯೋಜನೆಗೊಂಡಿದ್ದ ಮದುವೆ ಸಮಾರಂಭಕ್ಕೆ ಹೊರಟಿದ್ದರು. ಕಲಬುರಗಿ ಮಾರ್ಗವಾಗಿ ಬರುತ್ತಿದ್ದ ಡಿಸೇಲ್ ತುಂಬಿದ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಭೀಕರ ದುರಂತ ನಡೆದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ