ಆ್ಯಪ್ನಗರ

ಚುನಾವಣಾ ಪ್ರಕ್ರಿಯೆ ಜಾಗೃತಿ : ಕಲಬುರಗಿ ಜಿಪಂಗೆ ಪ್ರಶಸ್ತಿ

ಕಲಬುರಗಿ ಸ್ವೀಪ್‌ಗೆ ರಾಜ್ಯ ಚುನಾವಣಾ ಆಯೋಗ ಕೊಡಮಾಡಿದ ಪ್ರಶಸ್ತಿಯನ್ನು ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ಆಯೋಗದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ ಪ್ರದಾನ ಮಾಡಿದರು. ​

Vijaya Karnataka 1 Jan 2019, 5:00 am
ಕಲಬುರಗಿ: ಕಳೆದ 2018ರ ವಿಧಾನಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಸ್ವೀಪ್‌ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ವಿನೂತನವಾಗಿ ಹಮ್ಮಿಕೊಂಡಿರುವ ಪ್ರಯುಕ್ತ ಕಲಬುರಗಿ ಜಿಪಂ ರಾಜ್ಯದಲ್ಲಿಯೇ ಅತ್ಯುತ್ತಮ ಸ್ವೀಪ್‌ ಚಟುವಟಿಕೆ ಜರುಗಿಸಿದ ಜಿಲ್ಲೆ ಎಂಬ ಹೆಗ್ಗಳ್ಳಿಗೆ ದೊರೆತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
Vijaya Karnataka Web election process awareness kalaburagi zp award
ಚುನಾವಣಾ ಪ್ರಕ್ರಿಯೆ ಜಾಗೃತಿ : ಕಲಬುರಗಿ ಜಿಪಂಗೆ ಪ್ರಶಸ್ತಿ

ಬೆಳಗಾವಿಯಲ್ಲಿ ಭಾನುವಾರ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತ ಅಶೋಕ ಲವಾಸಾ ಅವರು ಚುನಾವಣಾ ಜಾಗೃತಿ ಮೂಡಿಸುವಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆ ಎಂಬ ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಹಿಂದಿನ ಸ್ವೀಪ್‌ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರಿಗೆ ಸನ್ಮಾನಿಸಲಾಗಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವಕುಮಾರ ಹಾಗೂ ತಂಡದ ಮಾರ್ಗದರ್ಶನದಂತೆ ಕಲಬುರಗಿ ಜಿಲ್ಲೆಯಲ್ಲಿ ಚುನಾವಣಾ ಜಾಗೃತಿ ಮೂಡಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಹಕರಿಸಿದ ಕಲಬುರಗಿ ಜಿಲ್ಲೆಯ ಸ್ವೀಪ್‌ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಎಲ್ಲ ಸದಸ್ಯರಿಗೆ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ