ಆ್ಯಪ್ನಗರ

ವಿದ್ಯುತ್‌ ಕಂಬ ಉರುಳಿ ವಿದ್ಯಾರ್ಥಿ ಸಾವು

ಪಟ್ಟಣದ ಸಮೀಪ ಬೈಚಬಾಳ ಗ್ರಾಮದಲ್ಲಿ ಭಾನುವಾರ ಸಂಜೆ ವಿದ್ಯುತ್‌ ಕಂಬ ಉರುಳಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

Vijaya Karnataka 24 Jun 2019, 9:54 pm
ಕೆಂಭಾವಿ :ಪಟ್ಟಣದ ಸಮೀಪ ಬೈಚಬಾಳ ಗ್ರಾಮದಲ್ಲಿ ಭಾನುವಾರ ಸಂಜೆ ವಿದ್ಯುತ್‌ ಕಂಬ ಉರುಳಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
Vijaya Karnataka Web electricity pole student dies
ವಿದ್ಯುತ್‌ ಕಂಬ ಉರುಳಿ ವಿದ್ಯಾರ್ಥಿ ಸಾವು


ತಿರುಪತಿ ಚಂದ್ರಕಾಂತ ಗೊಂಬೆ (14) ಮೃತ ವಿದ್ಯಾರ್ಥಿ. 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸಂಜೆ ಗ್ರಾಮದ ಹೊರವಲಯದಲ್ಲಿ ಬಹಿರ್ದೆಸೆಗೆ ಹೋದಾಗ ವೈಯರ್‌ ಸಂಪರ್ಕ ಇಲ್ಲದ ಹಳೇ ವಿದ್ಯುತ್‌ ಕಂಬ ಬಾಲಕನ ತಲೆ ಮೇಲೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣ ಬಾಲಕನನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ