ಆ್ಯಪ್ನಗರ

ಕಲಬುರಗಿಯಲ್ಲಿ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ಮೂವರು ಸಾವು!

ಚಹಾ ಮಾಡುತ್ತಿದ್ದ ವೇಳೆ ಸಿಲಿಂಡರ್‌ ಸ್ಫೋಟಗೊಂಡು, ತಂದೆ ತಾಯಿ ಮತ್ತು ಮಗ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಗರದ ಮಿಯಾಪುರ ಬಡಾವಣೆಯಲ್ಲಿ ನಡೆದಿದೆ. ಮೃತರೆಲ್ಲರೂ ಚಿಂಚೋಳಿ ತಾಲೂಕಿನ ಗಣಾಪುರ ಗ್ರಾಮದವರು.

Vijaya Karnataka Web 24 Mar 2020, 1:01 pm
ಕಲಬುರಗಿ: ಚಹಾ ಮಾಡುತ್ತಿದ್ದ ವೇಳೆ ಸಿಲಿಂಡರ್‌ ಸ್ಫೋಟಗೊಂಡು, ತಂದೆ ತಾಯಿ ಮತ್ತು ಮಗ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಗರದ ಮಿಯಾಪುರ ಬಡಾವಣೆಯಲ್ಲಿ ನಡೆದಿದೆ. ಮೃತರೆಲ್ಲರೂ ಚಿಂಚೋಳಿ ತಾಲೂಕಿನ ಗಣಾಪುರ ಗ್ರಾಮದವರು. ಬಿಚ್ಚಪ್ಪ ತಳವಾರ (55), ಮಹಾದೇವಿ ಬಿಚ್ಚಪ್ಪ ತಳವಾರ (48) ಮತ್ತು ಈ ದಂಪತಿಯ ಮಗ ಮಲ್ಲಿಕಾರ್ಜುನ (28) ಮೃತಪಟ್ಟವರು.
Vijaya Karnataka Web blast


ಭಾನುವಾರ ಬೆಳಗ್ಗೆ ತಮ್ಮ ಮನೆಯಲ್ಲಿ ಚಹಾ ಮಾಡಿಕೊಳ್ಳಲು ಹೋದಾಗ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಮೂವರೂ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಹೈದರಾಬಾದ್ ನಗರದ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೂವರೂ ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ