ಆ್ಯಪ್ನಗರ

37 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ

ಪ್ರಸಕ್ತ ಸಾಲಿನ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಸಿಇಟಿ-ನೀಟ್‌ ಉತ್ತೀರ್ಣರಾದ ಅಭ್ಯರ್ಥಿಗಳ ಕೌನ್ಸೆಲಿಂಗ್‌ ಮಂಗಳವಾರ ಇಲ್ಲಿನ ಪಿಡಿಎ ಎಂಜಿನಿಯರಿಂಗ್‌ ಕಾಲೇಜಿನ ಆರ್ಕಿಟೆಕ್ಚರ್‌ ಬ್ಲಾಕ್‌ನಲ್ಲಿ ಆರಂಭಗೊಂಡಿತು.

Vijaya Karnataka 13 Jun 2018, 6:11 pm
ಕಲಬುರಗಿ : ಪ್ರಸಕ್ತ ಸಾಲಿನ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರವೇಶ ಪಡೆಯುವ ನಿಟ್ಟಿನಲ್ಲಿ ಸಿಇಟಿ-ನೀಟ್‌ ಉತ್ತೀರ್ಣರಾದ ಅಭ್ಯರ್ಥಿಗಳ ಕೌನ್ಸೆಲಿಂಗ್‌ ಮಂಗಳವಾರ ಇಲ್ಲಿನ ಪಿಡಿಎ ಎಂಜಿನಿಯರಿಂಗ್‌ ಕಾಲೇಜಿನ ಆರ್ಕಿಟೆಕ್ಚರ್‌ ಬ್ಲಾಕ್‌ನಲ್ಲಿ ಆರಂಭಗೊಂಡಿತು.
Vijaya Karnataka Web first day of cet neet counseling
37 ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ


ಕೌನ್ಸೆಲಿಂಗ್‌ ಆರಂಭಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಈ ಬಾರಿಯ ಸಿಇಟಿ ಎಂಜಿನಿಯರಿಂಗ್‌ ವಿಭಾಗದಲ್ಲಿ 44ನೇ ರಾರ‍ಯಂಕ್‌ ಪಡೆದ ಭಾರ್ಗವ ಪಿ.ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ಪಿಡಿಎ ಉಪ ಪ್ರಾಂಶುಪಾಲ ಮಹಾದೇವಪ್ಪ ಗಾದಗೆ ಸೇರಿದಂತೆ ಇನ್ನಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ನಂತರ 10ಕ್ಕೆ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಗೊಂಡಿತು. ಮೊದಲ ದಿನದ ಭಾಗವಾಗಿ 1-1000ನೇ ರಾರ‍ಯಂಕ್‌ವರೆಗಿನ ಒಟ್ಟು 37 ಅಭ್ಯರ್ಥಿಗಳ ದಾಖಲಾತಿಗಳ ಪರಿಶೀಲನೆ ನಡೆಯಿತು. ಇನ್ನು, 1-1000ರ ಮಧ್ಯೆ ರಾರ‍ಯಂಕ್‌ ಪಡೆದಿರುವ ನೂರಾರು ವಿದ್ಯಾರ್ಥಿಗಳು ಮಂಗಳವಾರ ದಾಖಲಾತಿ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಬಾಕಿ ಉಳಿದಿರುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಬುಧವಾರವೂ ನಡೆಯಲಿದೆ.

ಪಿಯು ಪರೀಕ್ಷೆ ನಂತರ ಸಿಇಟಿ ಬರೆದ ಪಿಯು ವಿದ್ಯಾರ್ಥಿಗಳಿಗಾಗಿ ನಡೆಯುತ್ತಿರುವ ಈ ಕೌನ್ಸೆಲಿಂಗ್‌ ಪ್ರಕ್ರಿಯೆ ಇದೇ ಜೂ.26ರವರೆಗೆ ನಡೆಯಲಿದೆ. ರಾಜ್ಯದ ಒಟ್ಟು 18 ನೋಡಲ್‌ ಸೆಂಟರ್‌ಗಳಲ್ಲಿ ಕೌನ್ಸೆಲಿಂಗ್‌ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ