ಆ್ಯಪ್ನಗರ

ಕೇಂದ್ರದ ಮೇಲೆ ಒತ್ತಡ ಹೇರಲು ಒತ್ತಾಯ

ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೈದರಾಬಾದ್‌ ಕರ್ನಾಟಕ ಜನಪರ ಸಂಘರ್ಷ ಸಮಿತಿ ಪದಾಧಿಕಾರಿಗಳು ಮಾಜಿ ಶಾಸಕರಾದ ಬಿಜೆಪಿ ಗ್ರಾಮೀಣ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್‌ಗೆ ಮನವಿ ಸಲ್ಲಿಸಿದರು.

Vijaya Karnataka 10 Jan 2019, 5:00 am
ಕಲಬುರಗಿ :ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೈದರಾಬಾದ್‌ ಕರ್ನಾಟಕ ಜನಪರ ಸಂಘರ್ಷ ಸಮಿತಿ ಪದಾಧಿಕಾರಿಗಳು ಮಾಜಿ ಶಾಸಕರಾದ ಬಿಜೆಪಿ ಗ್ರಾಮೀಣ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್‌ಗೆ ಮನವಿ ಸಲ್ಲಿಸಿದರು.
Vijaya Karnataka Web force pressure on the center
ಕೇಂದ್ರದ ಮೇಲೆ ಒತ್ತಡ ಹೇರಲು ಒತ್ತಾಯ


ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ರೈಲ್ವೆ ವಿಭಾಗೀಯ ಕಚೇರಿ ಆರಂಭಿಸುವಂತೆ ಈಗಾಗಲೇ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಹೈಕದ ಸಂಸದರು, ಶಾಸಕರು ರಾಜ್ಯ ಸರಕಾರದ ನಿಯೋಗದೊಂದಿಗೆ ತೆರಳಿ ಪ್ರಧಾನಿಗೆ ಮನವಿ ಸಲ್ಲಿಸಲು ಹೊಸದೆಹಲಿಗೆ ತೆರಳಬೇಕು. ಈ ಕುರಿತು ಬಿಜೆಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ, ಎಚ್‌.ಎಂ.ಹಾಜಿ, ಗುರುರಾಜ ಭಂಡಾರಿ, ಆಕಾಶ ರಾಠೋಡ, ಅಸ್ಲಂ ಚೌಂಗೆ, ಬಾಬಾ ಫಕ್ರೂದ್ದೀನ್‌, ಸಂಗಮೇಶ ಬಿರಾದಾರ, ಶಿವಲಿಂಗಪ್ಪ ಬಂಡಕ್‌, ಮಲ್ಲಿನಾಥ ಸಂಗಶೆಟ್ಟಿ, ಶಾಂತಪ್ಪ ಕಾರಭಾಸಗಿ, ಶಿವುಕುಮಾರ ಹಿರೇಮಠ, ಸಿದ್ದು ಬಿರಾದಾರ, ವಿಶಾಲದೇವ ಧನೆಕರ್‌, ಶಶಿಕುಮಾರ, ಪಾಂಡುರಂಗ ಎಸ್‌., ಶ್ರೀಧರ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ