ಆ್ಯಪ್ನಗರ

ಗಾಂಧಿ ಜಯಂತಿ, ಶ್ರಮದಾನಕ್ಕೆ ಡಿಸಿ ಸೂಚನೆ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅ.2ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿಅಂದು ಜಿಲ್ಲೆಯ ಎಲ್ಲಸರಕಾರಿ ಕಚೇರಿ, ಶಾಲಾ-ಕಾಲೇಜುಗಳ ಆವರಣದಲ್ಲಿಕಡ್ಡಾಯವಾಗಿ ಸ್ವಚ್ಛತೆಯ ಶ್ರಮದಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್‌ ಅಧಿಕಾರಿಗಳು ಮತ್ತು ಶಾಲಾ-ಕಾಲೇಜು ಮುಖ್ಯಸ್ಥರಿಗೆ ಸೂಚನೆ ನೀಡಿದರು.

Vijaya Karnataka 1 Oct 2019, 5:00 am
ಕಲಬುರಗಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅ.2ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿಅಂದು ಜಿಲ್ಲೆಯ ಎಲ್ಲಸರಕಾರಿ ಕಚೇರಿ, ಶಾಲಾ-ಕಾಲೇಜುಗಳ ಆವರಣದಲ್ಲಿಕಡ್ಡಾಯವಾಗಿ ಸ್ವಚ್ಛತೆಯ ಶ್ರಮದಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಶರತ್‌ ಅಧಿಕಾರಿಗಳು ಮತ್ತು ಶಾಲಾ-ಕಾಲೇಜು ಮುಖ್ಯಸ್ಥರಿಗೆ ಸೂಚನೆ ನೀಡಿದರು.
Vijaya Karnataka Web gandhi jayanti shramadana
ಗಾಂಧಿ ಜಯಂತಿ, ಶ್ರಮದಾನಕ್ಕೆ ಡಿಸಿ ಸೂಚನೆ


ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರಮದಾನದ ಕುರಿತು ಅಧಿಕೃತವಾಗಿ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅ.2ರಂದು ಬೆಳಗ್ಗೆ 9ಕ್ಕೆ ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಿಷ್ಠಾಚಾರದಂತೆ ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ವಿವಿಧ ಧರ್ಮ ಗುರುಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ಕಲಾವಿದರಿಂದ ಸದ್ಭಾವನಾ ಗೀತಗಾಯನ ಆಯೋಜಿಸುವುದು. ಅಲ್ಲದೆ, ಗಾಂಧೀಜಿಯವರ ತತ್ವ ಸಂದೇಶ ಕುರಿತು ಸಾಹಿತಿ ವಸಂತ ಕುಷ್ಠಗಿಯವರಿಂದ ಉಪನ್ಯಾಸ ಸಹ ಏರ್ಪಡಿಸಲು ಸಭೆ ಒಪ್ಪಿಗೆ ಸೂಚಿಸಿತು.

ಡಾ.ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿನಡೆಯುವ ವೇದಿಕೆ ಕಾರ್ಯಕ್ರಮ ಹಾಗೂ ಟೌನ್‌ ಹಾಲ್‌ನಲ್ಲಿರುವ ಗಾಂಧಿ ಪ್ರತಿಮೆ ಸ್ಥಳ ಮತು ಸುತ್ತಲೂ ಸ್ವಚ್ಛತೆ ಕೈಗೊಳ್ಳಬೇಕು. ಸ್ವಚ್ಛತೆ ಕುರಿತು ಶ್ರಮದಾನ, ಪರಿಸರ ಮತ್ತು ಪ್ಲಾಸ್ಟಿಕ್‌ ನಿಷೇಧ ಕುರಿತಂತೆ ಸಾಮಾಜಿಕ ಸಂದೇಶ ಸಾರುವ ಕ್ರಿಯಾಶೀಲ ಕಾರ್ಯಕ್ರಮಗಳು, ಪ್ರತಿಜ್ಞಾ ವಿಧಿ ಬೋಧನೆ, ಬಾಪು ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ, ಕಿರು ಹೊತ್ತಿಗೆ ಬಿಡುಗಡೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಅಂದು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಸಿ. ತಾಕೀತು ಮಾಡಿದರು.

ಸಮಾರಂಭಕ್ಕೆ ಶಾಲಾ-ಕಾಲೇಜು ಹಾಗೂ ವಸತಿ ನಿಲಯದ ಮಕ್ಕಳನ್ನು ಕರೆತರುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿವಿದ್ಯುತ್‌ ಅಡೆತಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

ಅಪರ ಜಿಲ್ಲಾಧಿಕಾರಿ ಬಿ.ಶರಣಪ್ಪ, ಸಹಾಯಕ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿದೇಶಕ ಜಿ.ಬಿ.ಸಿದ್ದೇಶ್ವರಪ್ಪ ಜಯಂತಿ ಆಚರಣೆಗಾಗಿ ಕೈಗೊಂಡಿರುವ ಪೂರ್ವಸಿದ್ಧತೆ ಕುರಿತು ವಿವರಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ