ಆ್ಯಪ್ನಗರ

ಮೊಮ್ಮಗನಿಂದಲೇ ಅಜ್ಜಿಯ ಬರ್ಬರ ಹತ್ಯೆ

ಹಣಕ್ಕಾಗಿ ಮೊಮ್ಮಗನೊಬ್ಬ ಅಜ್ಜಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ತಾಲೂಕಿನ ಕಣಜಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

Vijaya Karnataka 4 Jul 2019, 4:03 pm
ಭಾಲ್ಕಿ:ಹಣಕ್ಕಾಗಿ ಮೊಮ್ಮಗನೊಬ್ಬ ಅಜ್ಜಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ತಾಲೂಕಿನ ಕಣಜಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
Vijaya Karnataka Web grandma murdered by her grandson
ಮೊಮ್ಮಗನಿಂದಲೇ ಅಜ್ಜಿಯ ಬರ್ಬರ ಹತ್ಯೆ


ಚಿದ್ರಿ ಗ್ರಾಮದ ಲಲಿತಾಬಾಯಿ ವರ್ಧನ (61) ಕೊಲೆಯಾದ ಅಜ್ಜಿ. ಕಣಜಿ ಗ್ರಾಮದ ಬಿಸಿಎಂ ವಸತಿ ನಿಲಯದಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಲಲಿತಾಬಾಯಿ ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ನಂತರ ಇವರಿಗೆ 6 ಲಕ್ಷ ರೂ. ಹಣ ಬಂದಿತ್ತು. ಈ ಹಣ ತನಗೆ ಕೊಡುವಂತೆ ಮೊಮ್ಮಗ ಅಖಿಲೇಶ ವಿಲಾಸ (22) ಹಲವು ದಿನಗಳಿಂದ ಅಜ್ಜಿ ಜತೆಗೆ ಗಲಾಟೆ ಮಾಡುತ್ತಿದ್ದ. ಮನೆ ಕಟ್ಟಿಸುವ ಉದ್ದೇಶ ಹೊಂದಿದ್ದ ಅಜ್ಜಿ ಮೊಮ್ಮಗನಿಗೆ ಹಣ ನೀಡದೇ ಇರುವುದಕ್ಕೆ ಕೋಪಗೊಂಡು ಆತ ಮಂಗಳವಾರ ಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಇವನನ್ನು ಹಿಡಿದು ಕಂಬಕ್ಕೆ ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಧನ್ನೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ