ಆ್ಯಪ್ನಗರ

ಜೇವರ್ಗಿಯಲ್ಲಿ ಭಾರಿ ಮಳೆಗೆ ಗೋಡೆ ಕುಸಿತ; ಓರ್ವ ಕಾರ್ಮಿಕ ಸಾವು

ತುಸು ಚದುರಿದ ಮಳೆ ಮತ್ತು ಭಾರಿ ಬಿರುಗಾಳಿಯಿಂದಾಗಿ ಶಹಬಾದ್ ಪಟ್ಟಣದಲ್ಲಿ ವಿದ್ಯುತ್ ಕಂಬಗಳು ಉರುಳಿ ಬಿದ್ದ ಬಗ್ಗೆ ವರದಿಯಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ದೃಢ ಪಡಿಸಿವೆ.

Vijaya Karnataka Web 17 Apr 2020, 9:10 pm
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಭಾರಿ ಗುಡುಗು ಸಹಿತ ಮಳೆಯಾಗಿದೆ. ಸೇಡಂ ತಾಲೂಕಿನಲ್ಲಿ ಆಲಿಕಲ್ಲು ಮಳೆಯಾಗಿದ್ದು ಜೇವರ್ಗಿ ಪಟ್ಟಣದಲ್ಲಿ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ತಾಲೂಕು ಕ್ರೀಡಾಂಗಣದ ಗೋಡೆಯೊಂದು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಘಟನೆಯಲ್ಲಿ ಕಾರ್ಮಿಕ ಯಲ್ಲಪ್ಪ ವಡ್ಡರ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಗಾಯಗಳಾಗಿವೆ. ಇದನ್ನು ಹೊರತುಪಡಿಸಿ ಜಿಲ್ಲೆಯ ಆಳಂದ ಅಫಜಲಪುರ ಚಿಂಚೋಳಿ ಚಿತ್ತಾಪುರ ಸೇಡಂ ತಾಲೂಕಿನಲ್ಲಿ ಗುಡುಗು ಸಹಿತ ಮಳೆಯಾಗಿದೆ. ಸೇಡಂನ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆ ಬಿದ್ದಿದೆ. ಇದರಿಂದ ತೋಟಗಾರಿಕೆ ಬೆಳೆಗೆ ಹಾನಿ ಸಂಭವಿಸಬಹುದು ಎಂದು ತೋಟಗಾರಿಕೆ ಇಲಾಖೆ ಮೂಲಗಳು ತಿಳಿಸಿವೆ.

ತುಸು ಚದುರಿದ ಮಳೆ ಮತ್ತು ಭಾರಿ ಬಿರುಗಾಳಿಯಿಂದಾಗಿ ಶಹಬಾದ್ ಪಟ್ಟಣದಲ್ಲಿ ವಿದ್ಯುತ್ ಕಂಬಗಳು ಉರುಳಿ ಬಿದ್ದ ಬಗ್ಗೆ ವರದಿಯಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ದೃಢ ಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ