ಆ್ಯಪ್ನಗರ

ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ತಾಕೀತು

ಸರ್ವರಿಗೂ ಆರೋಗ್ಯ ಒದಗಿಸುವ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‌ ನೀಡುವ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 18 Jul 2019, 9:09 pm
ಕಲಬುರಗಿ :ಸರ್ವರಿಗೂ ಆರೋಗ್ಯ ಒದಗಿಸುವ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್‌ ನೀಡುವ ನೋಂದಣಿ ಪ್ರಕ್ರಿಯೆ ಚುರುಕುಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web helps to reduce mother infant mortality
ತಾಯಿ-ಶಿಶು ಮರಣ ಪ್ರಮಾಣ ತಗ್ಗಿಸಲು ತಾಕೀತು


ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಎನ್‌.ಹೆಚ್‌.ಎಂ. ಜಿಲ್ಲಾ ಆರೋಗ್ಯ ಮಿಷನ್‌ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ರಾಜ್ಯದ ಎಲ್ಲ ನಿವಾಸಿಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷ ಣೆ ಒದಗಿಸುವ ವಿಶಿಷ್ಟ ಯೋಜನೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ಇದಾಗಿದೆ. ತಾಲೂಕು ಆಸ್ಪತ್ರೆ ಮತ್ತು ಸಿ.ಹೆಚ್‌.ಸಿ.ಯಲ್ಲಿ ಸಮರ್ಪಕ ನೊಂದಣಿ ಪ್ರಕ್ರಿಯೆ ನಡೆಸದ ಕಾರಣ ಸಾರ್ವಜನಿಕರು ಜಿಲ್ಲಾ ಆಸ್ಪತ್ರೆಗೆ ಧಾವಿಸುತ್ತಿದ್ದು, ಇದರಿಂದ ಆಸ್ಪತ್ರೆಯಲ್ಲಿ ಜನಸಂದಣಿ ಹೆಚ್ಚಾಗಿ ಚಿಕಿತ್ಸೆಗೆ ತೊಂದರೆಯಾಗುತ್ತಿದೆ. ತಾಲೂಕು ಹಂತದಲ್ಲಿ ನೊಂದಣಿ ಅಷ್ಟು ತೃಪ್ತಿಕರವಾಗಿಲ್ಲ. ನೊಂದಣಿ ಪ್ರಕ್ರಿಯೆ ತೀವ್ರಗೊಳಿಸಿ ಎಂದರು.

ಜಿಲ್ಲೆಯಲ್ಲಿ ಶಿಶು ಮರಣ-ತಾಯಿ ಮರಣ ಪ್ರಮಾಣ ತಗ್ಗಿಸಲು ವಿಶೇಷ ಕ್ರಮಕೈಗೊಳ್ಳಿ. ಗರ್ಭಿಣಿಯರ ನೋಂದಣಿ ಕಾರ್ಯ ನಿಧಾನಗತಿ ಸಹಿಸುವುದಿಲ್ಲ. ಗರ್ಭಿಣಿಯರು, ಬಾಣಂತಿಯರಿಗೆ ತುರ್ತು ರಕ್ತದ ಅವಶ್ಯವಿದ್ದಲ್ಲಿ ಸಮರ್ಪಕವಾಗಿ ರಕ್ತ ಸಿಗುವಂತಾಗಬೇಕು. ಇದಕ್ಕಾಗಿ ಟಿ.ಹೆಚ್‌.ಓ.ಗಳು ಹೆಚ್ಚಿನ ರಕ್ತದಾನ ಶಿಬಿರ ಆಯೋಜಿಸಿ ಯುವಕರು ರಕ್ತದಾನ ಮಾಡುವಂತೆ ಪ್ರೇರೇಪಿಸಬೇಕು. ಆದರೆ ಇದು ವಾಸ್ತವವಾಗಿ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಯಾವುದೇ ರಕ್ತ ನಿಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಕೂಡಲೆ ಅಂತವರ ವಿರುದ್ಧ ಕೇಸ್‌ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಅತಿಸಾರ ಬೇಧಿ ತಡೆಗಟ್ಟಲು ರಾಜ್ಯಾದ್ಯಂತ 2019ರ ಆಗಸ್ಟ್‌ ಮಾಹೆಯಿಂದ ರೋಟಾ ವೈರಸ್‌ ವ್ಯಾಕ್ಸಿನ್‌ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಈ ಬಗ್ಗೆ ಆರೋಗ್ಯ ಸಿಬ್ಬಂದಿಗಳಿಗೆ ತರಬೇತಿ ನೀಡಿ ಸಜ್ಜುಗೊಳಿಸಿ. ಸಭೆಗೆ ಅಗತ್ಯ ಮಾಹಿತಿ ತೆಗೆದುಕೊಂಡು ಬಾರದಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು, ಸಮಗ್ರ ಮಾಹಿತಿಯೊಂದಿಗೆ ಮುಂದಿನ ಸಭೆಗೆ ಬನ್ನಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಕೆ ಮಾಧವರಾವ ಪಾಟೀಲ್‌, ಜಿಲ್ಲಾ ಆರ್‌.ಸಿ.ಹೆಚ್‌.ಓ. ಅಧಿಕಾರಿ ಅಂಬರಾಯ ರುದ್ರವಾಡಿ, ಜಿಲ್ಲಾ ಆಸ್ಪತ್ರೆಯ ಸರ್ಜನ್‌ ಡಾ.ಶಿವಾನಂದ ಸುರಗಾಳಿ, ಜಿಲ್ಲಾ ಕ್ಷ ಯ ರೋಗ ನಿಯಂತ್ರಣಾಧಿಕಾರಿ ಡಾ.ರಾಜೇಂದ್ರ ಭಾಲ್ಕೆ, ಡಿಎಂಓ ಬಸವರಾಜ ಗುಳಗೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಕುಮಾರ, ಜಿಲ್ಲಾ ಸಮೀಕ್ಷ ಣಾಧಿಕಾರಿ ಡಾ.ಶಿವಶರಣಪ್ಪ, ಡಿಸಿಎಂಓ ಡಾ.ಗಣಜಲಖೇಡ್‌, ಜಿಮ್ಸ್‌ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಸಂದೀಪ ಮತ್ತು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ಉಷಾ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

108 ಸಮರ್ಪಕ ಸೇವೆಗೆ ಸೂಚನೆ

108 ಆಂಬುಲೆನ್ಸ್‌ ಸೇವೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದು, ಇ.ಎಂ.ಆರ್‌.ಐ. ಸಂಸ್ಥೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿ. ಲಸಿಕೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಶೇ.92 ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದ್ದು, ಇದು ಶೇ.100ರಷ್ಟು ಆಗಬೇಕು ಎಂದು ಡಿಸಿ ಸೂಚಿಸಿದರು.

ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ತ್ಯಾಜ್ಯವು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಚಾಂಪ್‌ ಸಂಸ್ಥೆಗೆ ನೀಡಬೇಕಾಗುತ್ತದೆ. ಇದುವರೆಗೆ ಚಾಂಪ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳದ ಆಸ್ಪತ್ರೆಗಳನ್ನು ಕೂಡಲೆ ಒಪ್ಪಂದ ಪ್ರಕ್ರಿಯೆಗೆ ಅಗತ್ಯ ಕ್ರಮ ವಹಿಸಿ ಎಂದು ನಿರ್ದೇಶನ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ