ಆ್ಯಪ್ನಗರ

‘ಬಸವಕಲ್ಯಾಣಕ್ಕೆ ನಾನಂತೂ ಟಿಕೆಟ್‌ ಆಕಾಂಕ್ಷಿಯಲ್ಲ’; ಬಿವೈ ವಿಜಯೇಂದ್ರ

ರಾಜ್ಯ ಉಪಾಧ್ಯಕ್ಷನಾದ ನಂತರ ಮೊದಲ ಬಾರಿ ಕಲಬುರಗಿಗೆ ಬಂದಿದ್ದೇನೆ ಎಂದ ವಿಜಯೇಂದ್ರ, ಹಿಂದೆ 15 ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. 15ರಲ್ಲಿ 12ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಗೆಲುವು ಆಗಿದೆ. ಶಿರಾ ಕ್ಷೇತ್ರ ದೊಡ್ಡ ಸವಾಲಾಗಿತ್ತು. ಆದರೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು.

Vijaya Karnataka Web 13 Nov 2020, 2:49 pm
ಕಲಬುರಗಿ: ಶಿರಾ ವಿಧಾನಸಭಾ ಚುನಾವಣೆಯ ತಂತ್ರಗಾರಿಕೆ ಹೆಣೆದು ಅದರಲ್ಲಿ ಯಶಸ್ವಿಯೂ ಆಗಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಸವಕಲ್ಯಾಣಕ್ಕೆ ಆಗಮಿಸಿದ್ದಾರೆ. ಬಸವಕಲ್ಯಾಣದಲ್ಲಿ ಮುಂದೆ ಉಪಚುನಾವಣೆ ನಡೆಯಲಿರುವುದರಿಂದ ವಿಜಯೇಂದ್ರ ಕ್ಷೇತ್ರಕ್ಕೆ ಆಗಮಿಸಿರುವುದು ಭಾರೀ ಕುತೂಹಲ ಮೂಡಿಸಿದೆ.
Vijaya Karnataka Web BY Vijayendra


ಅಸಂಖ್ಯಾತ ಕನ್ನಡಿಗರಿಗೆ ಬರಹಗಳ ಹುಚ್ಚು ಹತ್ತಿಸಿದ ‘ಅಕ್ಷರ ಮಾಂತ್ರಿಕ’ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ..!

ಈ ಸಂಬಂಧ ಬಸವಕಲ್ಯಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ವಿಜಯೇಂದ್ರ, ಬಸವಕಲ್ಯಾಣ ಉಪಚುನಾವಣೆಗೆ ನಾನಂತೂ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.ಇದೇ ವೇಳೆ ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಪಕ್ಷದ ಹೈಕಮಾಂಡ್ ನಿರ್ಣಯಿಸೋ ಅಭ್ಯರ್ಥಿ ಪರ ಕೆಲಸ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಸಿದ್ಧತೆಯ ಬಗ್ಗೆ ಯೋಜನೆ ರೂಪಿಸಿಯೇ ಬಂದಿರುವ ವಿಜಯೇಂದ್ರ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಉಪ ಚುನಾವಣೆ ಬರಲಿದೆ. ಬಸವಕಲ್ಯಾಣದಲ್ಲಿ ಇಂದು ಮುಖಂಡರನ್ನು ಭೇಟಿಯಾಗಿ ಬೆಂಗಳೂರಿಗೆ ತೆರಳುವೆ. ಬಿಜೆಪಿ ರಾಜ್ಯಾಧ್ಯಕ್ಷರು ಯಾವ ಕ್ಷೇತ್ರದ ಜವಾಬ್ದಾರಿ ಕೊಟ್ಟರೂ ಅದನ್ನು ವಹಿಸಿಕೊಳ್ಳುವೆ ಎಂದು ಹೇಳಿದ್ದಾರೆ.

ಪಟಾಕಿ ನಿಷೇಧದ ಅಸ್ಪಷ್ಟ ಆದೇಶ, ಹಸಿರು ಪಟಾಕಿ ಎಂದರೇನು? ಸ್ಪಷ್ಟನೆಗೆ ಹೈಕೋರ್ಟ್‌ ತಾಕೀತು

ಇನ್ನು ರಾಜ್ಯ ಉಪಾಧ್ಯಕ್ಷನಾದ ನಂತರ ಮೊದಲ ಬಾರಿ ಕಲಬುರಗಿಗೆ ಬಂದಿದ್ದೇನೆ ಎಂದ ವಿಜಯೇಂದ್ರ, ಹಿಂದೆ 15 ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು. 15ರಲ್ಲಿ 12ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲಿ ಗೆಲುವು ಆಗಿದೆ. ಶಿರಾ ಕ್ಷೇತ್ರ ದೊಡ್ಡ ಸವಾಲಾಗಿತ್ತು. ಆದರೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು.

ಹಿರಿಯ ಪತ್ರಕರ್ತ ರವಿ ಬೆಳೆಗೆರೆ ನಿಧನ: ಖ್ಯಾತ ಬರಹಗಾರ ನಡೆದು ಬಂದ ಹಾದಿ ಇಲ್ಲಿದೆ!

ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್‌ಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ ಎಂದ ಅವರು, ಆದರೆ ಬಿಜೆಪಿ ಎಲ್ಲ ಸಮುದಾಯಗಳನ್ನು ಒಂದಾಗಿ ಕಂಡಿರುವುದರಿಂದ ಕಮಲ ಅರಳಿದೆ. ಎಲ್ಲಿಯೇ ಹೋದರೂ ಕಮಲ ಅರಳುತ್ತದೆ ಎನ್ನುವ ವಿಶ್ವಾಸವಿದೆ. ಯಡಿಯೂರಪ್ಪ ಅವರ ಕೆಲಸಗಳೇ ಗೆಲುವಿಗೆ ಶ್ರೀರಕ್ಷೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ