ಆ್ಯಪ್ನಗರ

ಅಕ್ರಮ ಮರಳು ಸಾಗಾಣಿಕೆ: ಒಬ್ಬನ ಬಂಧನ

ಅಫಜಲಪುರ ತಾಲೂಕಿನ ಮಣ್ಣೂರ್‌ ಗ್ರಾಮದಲ್ಲಿ ಮಂಗಳವಾರ ಸಂಜೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿ ಟ್ಟಿಪ್ಪರ್‌ ಜಪ್ತಿ ಮಾಡಿಕೊಳ್ಳಲಾಗಿದೆ.

Vijaya Karnataka 11 Oct 2018, 4:43 pm
ಕಲಬುರಗಿ : ಅಫಜಲಪುರ ತಾಲೂಕಿನ ಮಣ್ಣೂರ್‌ ಗ್ರಾಮದಲ್ಲಿ ಮಂಗಳವಾರ ಸಂಜೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿ ಟ್ಟಿಪ್ಪರ್‌ ಜಪ್ತಿ ಮಾಡಿಕೊಳ್ಳಲಾಗಿದೆ.
Vijaya Karnataka Web illegal sand transport ones arrest
ಅಕ್ರಮ ಮರಳು ಸಾಗಾಣಿಕೆ: ಒಬ್ಬನ ಬಂಧನ


ಬಂಧಿತ ವ್ಯಕ್ತಿಯನ್ನು ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಹೈದ್ರಾದ ಶೇಖರ ಚಂದ್ರಕಾಂತ ಜಾಧವ್‌ ಎಂದು ಗುರುತಿಸಲಾಗಿದೆ. ಈತ ನೋಂದಾಯಿತ ನಂಬರ್‌ ಇಲ್ಲದ ಟಿಪ್ಪರ್‌ನಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದಾಗ, ಅಫಜಲಪುರ ಸಿಪಿಐ ಮಹಾಂತೇಶ ಪಾಟೀಲ ಹಾಗೂ ಸಿಬ್ಬಂದಿ ದಾಳಿ ಮಾಡಿ ಬಂಧಿಸಿ, ಟಿಪ್ಪರ್‌ ವಶಕ್ಕೆ ಪಡೆದಿದ್ದಾರೆ.

ಟಿಪ್ಪರ್‌ ಅಂದಾಜು 10ಲಕ್ಷ ರೂ. ಹಾಗೂ ಮರಳಿನ ಮೌಲ್ಯ 10ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ. ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜಾಟ: ಬಂಧನ

ಪಟ್ಟಣದ ರೇವಣಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಂಗಳವಾರ ಸಂಜೆ ಜೂಜು ಆಡಲು ಆಹ್ವಾನ ನೀಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಸಂಜೀವಕುಮಾರ ಗೌರ ಎಂದು ಗುರುತಿಸಲಾಗಿದ್ದು, ಈತನನ್ನು ಬಂಧಿಸಿ ಜೂಜಾಟಕ್ಕೆ ಬಳಸಿದ ಕೆಲವು ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ