ಆ್ಯಪ್ನಗರ

ದತ್ತಾತ್ರೇಯ ಸನ್ನಿಧಿಯಲ್ಲಿ ಜನಾರ್ದನ ರೆಡ್ಡಿ ವಿಶೇಷ ಪೂಜೆ

ಇಂದು ಮಧ್ಯಾಹ್ನ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಗಾಲಿ ಜನಾರ್ದನ ರೆಡ್ಡಿ ದತ್ತಾತ್ರೇಯ ಸುವರ್ಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರುದ್ರಾಭಿಷೇಕ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯ ನೆರವೇರಿಸಿದರು.

Vijaya Karnataka Web 26 May 2019, 9:16 pm
ಕಲಬುರಗಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರದಲ್ಲಿರುವ ಸುಪ್ರಸಿದ್ಧ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಗಾಲಿ ಜನಾರ್ದನ ರೆಡ್ಡಿ ದತ್ತಾತ್ರೇಯ ಸುವರ್ಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರುದ್ರಾಭಿಷೇಕ ನೆರವೇರಿಸಿ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯ ನೆರವೇರಿಸಿದರು.

ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಆಂಧ್ರ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಂದ ಅಪಾರ ಭಕ್ತರು ಆಗಮಿಸಿ ಹರಕೆ ತೀರಿಸುತ್ತಾರೆ.

ಅದರಲ್ಲೂ ರಾಜಕೀಯ ನಾಯಕರೂ ಹೆಚ್ಚಾಗಿ ಆಗಮಿಸುತ್ತಾರೆ‌. ಇತ್ತೀಚೆಗಷ್ಟೇ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹ ದತ್ತಾತ್ರೇಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ