ಆ್ಯಪ್ನಗರ

Gujarat Election Results | ಗುಜರಾತ್‌ ಫಲಿತಾಂಶದಲ್ಲಿ ಅಚ್ಚರಿ ಏನೂ ಇಲ್ಲ, ಅದನ್ನು ನೋಡಿ ಕನ್ನಡಿಗರು ಮತ ಹಾಕಲ್ಲ: ಎಚ್‌ಡಿಕೆ

HD Kumaraswamy reaction on Gujarat Election: ಗುಜರಾತ್‌ಗೂ ಕರ್ನಾಟಕಕ್ಕೂ ಬಹಳ ಅಂತರವಿದೆ. ಅಲ್ಲಿನ ಫಲಿತಾಂಶ ಅನಿರೀಕ್ಷಿತ ಅಥವಾ ಅಚ್ಚರಿಯೇನೂ ಇಲ್ಲ, ಅಲ್ಲಿ ಬಿಜೆಪಿಗೆ ವಿಪಕ್ಷದ ಪ್ರಬಲ ಸ್ಪರ್ಧೆ ಇರಲಿಲ್ಲ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಕರ್ನಾಟಕದ ಜನರು ಅಲ್ಲಿನ ಫಲಿತಾಂಶ ನೋಡಿ ಮತ ಹಾಕುವುದಿಲ್ಲ, ರಾಜ್ಯದ ಮೇಲೆ ಯಾವುದೇ ಪರಿಣಾಮವೂ ಆಗುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.

Edited byಹೇಮಂತ್ ಕುಮಾರ್ ಎಸ್ | Lipi 8 Dec 2022, 7:19 pm

ಹೈಲೈಟ್ಸ್‌:

  • ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ವರ್ಕೌಟ್ ಆಗಲ್ಲ
  • ಗುಜರಾತ್‌ ಫಲಿತಾಂಶ ನೋಡಿ ಕನ್ನಡಿಗರು ಮತ ಹಾಕಲ್ಲ: ಎಚ್‌ಡಿಕೆ
  • ಫಲಿತಾಂಶ ಅಚ್ಚರಿ ತಂದಿಲ್ಲ ಎಂದ ಮಾಜಿ ಸಿಎಂ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web HD Kumaraswamy
ಎಚ್.ಡಿ.ಕುಮಾರಸ್ವಾಮಿ
ಕಲಬುರಗಿ: ಗುಜರಾತ್ ಫಲಿತಾಂಶ ನನಗೇನು ಅಚ್ಚರಿ ಉಂಟು ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುಜರಾತಿನ ಫಲಿತಾಂಶ ಅಚ್ಚರಿ ಮೂಡಿಸುವ ಫಲಿತಾಂಶ ಅಲ್ಲ. ಈ ಚುನಾವಣೆ ಪೂರ್ವದಲ್ಲೇ ಅಲ್ಲಿ ವಿಪಕ್ಷಗಳ ಶಕ್ತಿ ಕುಂಠಿತವಾಗಿತ್ತು ಎಂದರು.
Gujarat Election Result: ಗುಜರಾತ್ ಚುನಾವಣೆ: ಯಾವ ಸಂಸ್ಥೆಯ ಎಕ್ಸಿಟ್ ಪೋಲ್ ಲೆಕ್ಕಾಚಾರ ನಿಖರ?
ಗುಜರಾತ್‌ನಲ್ಲಿ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳ ಶಕ್ತಿ ಕುಂದಿದೆ. ಆದರೆ, ಗುಜರಾತ್ ಫಲಿತಾಂಶ ಬಿಜೆಪಿ ಸಾಧನೆ ಅಲ್ಲಾ ಎಂದರು. ಗುಜರಾತ್ ಚುನಾವಣೆ ರಾಜ್ಯಕ್ಕೆ ದಿಕ್ಸೂಚಿ ಆಗಲಾರದು. ಗುಜರಾತ್ ಗೂ ಕರ್ನಾಟಕಕ್ಕೂ ಎಷ್ಟು ಕಿಲೋ ಮೀಟರ್ ದೂರವಿದೆ. ಗುಜರಾತ್ ರಾಜಕಾರಣವೇ ಬೇರೆ, ಕರ್ನಾಟಕ ರಾಜಕಾರಣವೇ ಬೇರೆ. ಅಲ್ಲಿ ಫಲಿತಾಂಶ ನೋಡಿ ಕನ್ನಡಿಗರು ಮತ ಹಾಕಲ್ಲಾ ಎಂದು ಪರೋಕ್ಷವಾಗಿ ಬಿಜೆಪಿಗೆ ಕುಟುಕಿದರು.

ಗುಜರಾತ್‌ನಲ್ಲಿ ವಿಪಕ್ಷಗಳು ಇಲ್ಲದ ಕಾರಣ ಜನತೆ ಇಂತಹ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ನಿರೀಕ್ಷಿತ ಫಲಿತಾಂಶ ಬಂದಿದೆ. ಇದರಿಂದ ಅಚ್ಚರಿ ಏನೂ ಆಗಿಲ್ಲ. ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕ ಮೇಲೆ ಪರಿಣಾಮ ಬಿರಲ್ಲ ಎಂದು ಅವರು ಹೇಳಿದರು.
Narendra Modi: 'ಥ್ಯಾಂಕ್‌ ಯು ಗುಜರಾತ್‌..' ದಾಖಲೆಯ ಗೆಲುವಿಗೆ ನರೇಂದ್ರ ಮೋದಿ ಭಾವುಕ
ಗುಜರಾತ್ ಫಲಿತಾಂಶ ಇಟ್ಕೊಂಡು ಇವರು ರಾಜ್ಯಕ್ಕೆ ಬಂದು ಹೇಗೆ ಮತ ಕೇಳುತ್ತಾರೆ ಎಂದು ಕೇಳಿದ ಮಾಜಿ ಮುಖ್ಯಮಂತ್ರಿಗಳು ಓಟ್ ಹೇಗೆ ಕೇಳ್ತಾರೆ? ಇವರು ರಾಜ್ಯದಲ್ಲಿ ಏನ್ ಕೆಲಸ ಮಾಡಿದಾರೆ ಅಂತಾ ಗುಜರಾತ್ ಹೆಸರು ಹೇಳಿ ಓಟ್ ಕೇಳ್ತಾರೆ? ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದು ಬಿಜೆಪಿ ಮಕಾಡೆ ಮಲಗಿದೆ. ಮಕಾಡೆ ಮಲಗೋದು ಎದ್ದೇಳೋದು ಆ ಪಕ್ಷಗಳ ಸಂಘಟನೆ ಮೇಲೆ ಅವಲಂಭಿಸಿರುತ್ತದೆ ಎಂದು ಹೇಳಿದರು.

ಗುಜರಾತ್ ಚುನಾವಣೆ ಫಲಿತಾಂಶದಿಂದ ಯಾವುದೇ ರಾಜ್ಯದ ಮೇಲೆ ಪರಿಣಾಮ ಬಿರಲ್ಲ ಎಂದು ಒತ್ತಿ ಹೇಳಿದ ಅವರು, ಗುಜರಾತ್ ಫಲಿತಾಂಶ ಬೀರುತ್ತೆ ಅಂತಾ ಸಿಎಂ ಬೊಮ್ಮಾಯಿ ಹೇಳಿಕೆ ಸರಿಯಲ್ಲ. ಅಖಾಡಕ್ಕೆ ಇಳಿದಾಗ ಯಾರೇನು ಅನ್ನೋದು ತಿಳಿಯಲಿದೆ ಎಂದರು.
Gujarat Election Results: ಗುಜರಾತ್ ಚುನಾವಣೆ: ಗೆದ್ದು ಬೀಗಿದ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬಾ
ಗುಜರಾತ್‌ನಲ್ಲಿ ಆಪ್‌ಗೆ ಬಿಜೆಪಿ ಫಂಡಿಗ್ ಮಾಡಿದೆ ಅನ್ನೋ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ನಾನು ಆ ಬಗ್ಗೆ ಲಘುವಾಗಿ ಮಾತನಾಡಲ್ಲಾ. ಅದು ಬಿಜೆಪಿ ಬಿ ಟೀಮ್ ಅಂತ ನಾನು ಹೇಳಲ್ಲಾ. ಯಾಕಂದ್ರೆ ಈ ಹಿಂದೆ ಕಾಂಗ್ರೆಸ್ ನವರು ಜೆಡಿಎಸ್‌ ಅನ್ನು ಬಿ ಟೀಮ್ ಅಂದಿದ್ದರು. ನಾಯಕತ್ವದ ಕೊರತೆಯಿಂದ ಕಾಂಗ್ರೆಸ್ ನಾಯಕರು ಬೇರೆಯವರ ಮೇಲೆ ಹಾಕಿ ಅವರಿಂದ ನಮಗೆ ತೊಂದರೆ ಆಯ್ತು ಅನ್ನೋದು ಸರಿಯಲ್ಲಾ ಎಂದು ಕಾಂಗ್ರೆಸ್ ವೈಖರಿ ಟೀಕಿಸಿದರು.

ರಾಜ್ಯದಲ್ಲಿ ಮೋದಿ ಮ್ಯಾಜಿಕ್ ವರ್ಕೌಟ್ ಆಗಲ್ಲಾ, ರಾಜ್ಯದ ಜನರಿಗೆ ಮೋದಿ ಮ್ಯಾಜಿಕ್ ಬಗ್ಗೆ ಈಗಾಗಲೇ ಗೊತ್ತಾಗಿದೆ. ಮೋದಿ ಅವರು ಬರಿ ಆಕಾಶ ತೋರಿಸಿ ಹೋಗ್ತಾರೆ ಎಂದು ಹೇಳಿದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ