ಆ್ಯಪ್ನಗರ

ಕಲಬುರಗಿ: ಬ್ಯಾಂಕಿಗೆ ಕೋಟಿಗಟ್ಟಲೆ ಪಂಗನಾಮ ಹಾಕಿದ ಗ್ಯಾಂಗ್ ಅರೆಸ್ಟ್!

ಬ್ಯಾಂಕ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ-ಕೋಟಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ನಲ್ಲಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

Vijaya Karnataka Web 24 Jun 2020, 3:16 pm
ಕಲಬುರಗಿ: ಜಿಲ್ಲೆಯಲ್ಲಿ ಬ್ಯಾಂಕ್‌ಗಳನ್ನೇ ಟಾರ್ಗೆಟ್ ಮಾಡಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ-ಕೋಟಿ ವಂಚನೆ ಮಾಡುತ್ತಿದ್ದ ಗ್ಯಾಂಗ್ ನಲ್ಲಿ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
Vijaya Karnataka Web kalaburagi


ನಾಲ್ಕು ಜನರ ಈ ಗ್ಯಾಂಗ್‌ನಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ ಲೋನ್ ಹೆಸರಲ್ಲಿ ವಂಚನೆ ಮಾಡುವ ಈ ಖತರ್ನಾಕ್ ಗ್ಯಾಂಗ್ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್‌ಗಳಿಗೆ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೊಸ ಕಾರ್ ಖರೀದಿಸುವುದಾಗಿ ಇಲ್ಲಿ‌ನ ಕೃಷ್ಣಾ ಗ್ರಾಮೀಣ ಬ್ಯಾಂಕ್‌ವೊಂದರಲ್ಲೇ ಬರೋಬ್ಬರಿ 45 ಲಕ್ಷ ರೂ. ಸಾಲ ಪಡೆದು ವಂಚನೆ ಮಾಡಿದೆ. ಕೇವಲ ಕೆಜಿಬಿ ಬ್ಯಾಂಕ್ ಅಷ್ಟೇ ಅಲ್ಲ, ಬ್ಯಾಂಕ್ ಆಫ್ ಬರೋಡಾ ಸೇರಿ ಹಲವು ಬ್ಯಾಂಕ್‌ಗಳಲ್ಲಿ ಕೋಟಿಗಟ್ಟಲೆ ಸಾಲ ಪಡೆದು ವಂಚಿಸಿರುವುದು ಬೆಳಕಿಗೆ ಬಂದಿದೆ.

ಚಿತ್ತಾಪುರ ತಾಲೂಕಿನ ಬಸವಂತರಾಯ್ ತನ್ನ ಗ್ಯಾಂಗ್‌ನ ಶಂಕರ ಕಾಳೆ, ಸಿದ್ದಮ್ಮಾ ಮತ್ತು ಅಮರೇಶ್ವರ ಎಂಬುವರ ಹೆಸರಿನಲ್ಲಿ ಹತ್ತಾರು ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದಾರೆ. ಈ ಸಂಬಂಧ ಕಲಬುರಗಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಸವಂತರಾಯ ಪಾಟೀಲ್‌ನ ಬಂಧಿಸಿದ್ದಾರೆ. ಈತನ ಜೊತೆಗಿದ್ದ ಮೂವರು ಆರೋಪಿಗಳು ತೆಲೆಮರೆಸಿಕೊಂಡಿದ್ದು, ಮೂರು ಜನರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ