ಆ್ಯಪ್ನಗರ

Karnataka Elections 2023: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ, ಮೇ 8ರಿಂದ 10ರವರೆಗೆ 144 ಸೆಕ್ಷನ್ ಜಾರಿ

ಈಗಾಗಲೇ ರಾಜ್ಯಾದ್ಯಂತ ಹದ್ದಿನಕಣ್ಣಿಟ್ಟ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ, ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ, ಕೋಟ್ಯಾಂತರ ಮೌಲ್ಯದ ಹಣ, ವಸ್ತುಗಳನ್ನು ವಶಪಡಿಸಿಕೊಂಡಿದೆ. ಮತದಾನದ ದಿನಾಂಕ ಕೂಡ ಸಮೀಪಿಸುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಮೇ 8ರಿಂದ 10ರವರೆಗೆ 144 ಸೆಕ್ಷನ್ ಜಾರಿ ಮಾಡುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Edited byಶ್ರುತಿ ಡಿ | Vijaya Karnataka Web 22 Apr 2023, 2:13 pm

ಹೈಲೈಟ್ಸ್‌:

  • ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ.
  • ಮೇ 8ರಿಂದ 10ರವರೆಗೆ 144 ಸೆಕ್ಷನ್ ಜಾರಿ ಹಿನ್ನಲೆ, ಮದ್ಯ ನಿಷೇಧ ಸೇರಿದಂತೆ ಹಲವು ನಿರ್ಬಂಧ ವಿಧಿಸಲಾಗಿದೆ.
  • ಮತಗಟ್ಟೆಗಳ 100 ಮೀಟರ್‌ ಒಳಗೆ ಚುನಾವಣಾ ಪ್ರಚಾರ ಕೂಡ ನಿಷೇಧ.

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕಲಬುರಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಇದರ ಪ್ರಯುಕ್ತ ಮೇ 8ರ ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನವು ಮುಕ್ತಾಯವಾಗುವವರೆಗೆ 144 ರನ್ವಯ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ.ಗುರುಕರ್‌ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ನಗರ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು 5 ಜನರಿಗಿಂತ ಹೆಚ್ಚಿನ ಜನರು ಸೇರತಕ್ಕದಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

100 ಮೀಟರ್‌ ಒಳಗೆ ಪ್ರಚಾರ ನಿಷೇಧ
ಮತಗಟ್ಟೆಗಳ 100 ಮೀಟರ್‌ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್‌ ಅಂಗಡಿ, ಬುಕ್‌ಸ್ಟಾಲ್‌, ಸೈಬರ್‌ ಕೆಫೆಗಳನ್ನು ನಿರ್ಭಂಧಿಸಿದೆ. ಕಲ್ಲುಗಳನ್ನು, ಕಾರ ಪದಾರ್ಧ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು, ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
Electoral Malpractice: ನೀತಿ ಸಂಹಿತೆ ಉಲ್ಲಂಘನೆ- ಜನಪ್ರತಿನಿಧಿ ವಿರುದ್ಧ ಕೇಸ್ ದಾಖಲಾದರು ಶಿಕ್ಷೆ ಇಲ್ಲ!
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಾರದಂತೆ ಹಾಗೂ ಕೋವಿಡ್‌ ಮಾರ್ಗಸೂಚಿಗಳನ್ನು/ನಿಯಮಗಳನ್ನು ಪಾಲಿಸಬೇಕು.

ಮತಗಟ್ಟೆಗಳ ಸುತ್ತ ಮೊಬೈಲ್‌ ನಿಷೇಧ

ಮತಗಟ್ಟೆಗಳ ಸುತ್ತಲೂ 100 ಮೀ. ಅಂತರದಲ್ಲಿ ಮೊಬೈಲ್‌ ಫೋನ್‌, ಕಾರ್ಡ್‌ಲೆಸ್‌ ಫೋನ್‌ ಅಥವಾ ಇತರೆ ಎಲೆಕ್ಟ್ರಾನಿಕ್ಸ್‌ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು (ಚುನಾವಣಾ ಕಾರ್ಯದಲ್ಲಿ ಜಿಲ್ಲಾಚುನಾವಣಾಧಿಕಾರಿ/ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ಸಿಬ್ಬಂದಿ ಹೊರತುಪಡಿಸಿ) ನಿಷೇಧಿಸಲಾಗಿದೆ.
Election Badoota : ರಾಜಕೀಯ ಸಭೆ ಸಮಾರಂಭದಲ್ಲಿ ಬಾಡೂಟಕ್ಕಿಲ್ಲಅನುಮತಿ; ನೀರು ಮಜ್ಜಿಗೆಯಷ್ಟೇ ಗತಿ!
ಮದ್ಯ ನಿಷೇಧ
ಮೇ 10ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ಸಂದರ್ಭದಲ್ಲಿ ನಗರ ಹಾಗೂ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಯಶವಂತ ವಿ.ಗುರುಕರ್‌ ಆದೇಶಿಸಿದ್ದಾರೆ. ಮೇ 8ರ ಸಂಜೆ 6ಗಂಟೆಯಿಂದ ಮೇ 10ರ ಮಧ್ಯರಾತ್ರಿ 12ಗಂಟೆಯವರೆಗೆ ಹಾಗೂ ಮೇ 13ರ ಬೆಳಗಿನ 6 ಗಂಟೆಯಿಂದ ಮೇ 14ರ ಬೆಳಗಿನ 6ರವರೆಗೆ ಎಲ್ಲತರಹದ ಮದ್ಯ ಮಾರಾಟ, ಶೇಖರಣೆ, ಮದ್ಯಪಾನ ನಿಷೇಧಿಸಲಾಗಿದೆ. ಅಲ್ಲದೆ ಬಾರ್‌ಗಳು, ಕ್ಲಬ್‌ಗಳು, ಮತ್ತು ಬಾರ್‌ ರೆಸ್ಟೋರೆಂಟ್‌ ಹಾಗೂ ಮದ್ಯದ ಡಿಪೋ (ಕೆಎಸ್‌ಬಿಸಿಎಲ್‌) ಗಳನ್ನು ಮುಚ್ಚುವುದರೊಂದಿಗೆ ಮದ್ಯ ಮಾರಾಟ ಹಾಗೂ ಸಾಗಣೆ ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಲೇಖಕರ ಬಗ್ಗೆ
ಶ್ರುತಿ ಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ, ಗುತ್ತಿಗೆ ಆಧಾರದ ಮೇಲೆ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಹುಟ್ಟಿ ಬೆಳೆದಿದ್ದು, ಮಲೆನಾಡು ಶಿವಮೊಗ್ಗ ಜಿಲ್ಲೆಯ, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಬರೆಯುವುದು, ಹಿನ್ನೆಲೆ ಧ್ವನಿ, ಚಾರಣ, ಕವನ ರಚನೆ ನೆಚ್ಚಿನ ಹವ್ಯಾಸ. ಪ್ರಚಲಿತ ವಿದ್ಯಮಾನ, ರಾಜಕೀಯ, ಕೃಷಿ ಆಸಕ್ತಿವುಳ್ಳ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ