ಆ್ಯಪ್ನಗರ

ಉತ್ತರ ಕರ್ನಾಟಕ ನೆರೆ ಪರಿಹಾರ ವಿಚಾರದಲ್ಲಿ ಸಿಎಂ ಮಲತಾಯಿ ಧೋರಣೆ: ಈಶ್ವರ ಖಂಡ್ರೆ ಆರೋಪ

ನೆರೆ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಕಲ್ಯಾಣ ಕರ್ನಾಟಕದ ವಿಷಯದಲ್ಲಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

Vijaya Karnataka Web 20 Oct 2020, 2:33 pm
ಕಲಬುರಗಿ: ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ಕೈಗೊಳ್ಳುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ. ಅದರಲ್ಲೂ ಮುಖ್ಯವಾಗಿ ನೆರೆ ವಿಚಾರದಲ್ಲಿ ಕಲ್ಯಾಣ ಕರ್ನಾಟಕದ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಲತಾಯಿ ಧೋರಣೆ ತೋರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
Vijaya Karnataka Web eshwar khandre


ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹದ ಕಾರಣಕ್ಕಾಗಿ ಸುಮಾರು 15 ಸಾವಿರ ಕೋಟಿಯಷ್ಡು ನಷ್ಟ ಉಂಟಾಗಿದೆ. ಬೀದರ್ ಜಿಲ್ಲೆಯೊಂದರಲ್ಲಿಯೇ ಸುಮಾರು 2 ಲಕ್ಣ 60 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ ಅಂದಾಜು ₹ 2000 ಕೋಟಿಯಷ್ಟು ಬೆಳೆ ಹಾನಿ ಸಂಭವಿಸಿದೆ. ವಸ್ತು ಸ್ಥಿತಿ ಹೀಗಿರುವಾಗ ಇಡೀ ಕಲ್ಯಾಣ ಕರ್ನಾಟಕದಲ್ಲಿ ₹ 3000 ಕೋಟಿ ನಷ್ಟ ಉಂಟಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಯಾವ ಆಧಾರದ ಮೇಲೆ ಹೇಳಿದ್ದಾರೋ ಅರ್ಥವಾಗುತ್ತಿಲ್ಲ.
ನೆರೆಯ ಭೀಬತ್ಸ ಸ್ಥಿತಿ ನಿರ್ಮಾಣಗೊಂಡು ನಾಲ್ಕು ದಿನಗಳಾದ ಬಳಿಕ ಮುಖ್ಯಮಂತ್ರಿಗಳು ನೆರೆಯ ವೈಮಾಜಿಕ ಸಮೀಕ್ಷೆ ಕೈಗೊಳ್ಳಲು ಹೊರಟಿದ್ದಾರೆ. ಈಗಾಗಲೆ ಪ್ರವಾಹ ಸ್ಥಿತಿ ಕಡಿಮೆಯಾಗಿದೆ. ಹೀಗಿರುವಾಗ ಸಿಎಂ ಕಣ್ಣುಗಳಿಗೆ ಯಾವ ಸತ್ಯ ದರ್ಶನ ಆಗುತ್ತದೆ?

ಕಲಬುರಗಿ ಜಿಲ್ಲೆಯ ಅಫಜಲುರ ಮತ್ತು ಜೇವರ್ಗಿ ತಾಲೂಕಿನಲ್ಲಿ ಮಳೆ ಮತ್ತು ನೆರೆಯಿಂದಾಗಿ ವಿಪರೀತ ನಷ್ಟ ಸಂಭವಿಸಿದೆ. ಇಷ್ಟಾದರೂ ಮುಖ್ಯಮಂತ್ರಿಗಳು ಈ ಕ್ಷೇತ್ರಗಳ ಕಾಂಗ್ರೆಸ್ ಶಾಸಕರ ಜೊತೆ ಈವರೆಗೆ ಕೈಗೊಳ್ಳಬೇಕಾದ ನೆರೆ ಪರಿಹಾರ ಕಾರ್ಯಗಳ ಕುರಿತು ಸೌಜನ್ಯಕ್ಕೂ ಚರ್ಚಿಸಿಲ್ಲ. ಸ್ಥಳೀಯ ಶಾಸಕರನ್ನು ಗಣನೆಗೆ ತೆಗೆದುಕೊಳ್ಳದೆ ಈ ಕ್ಷೇತ್ರಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳುವುದು ಎಷ್ಟುಸರಿ? ಹಾಗಾಗಿ ವೈಮಾನಿಕ ಸಮೀಕ್ಷೆಗೂ ಮುನ್ನ ಪ್ರತಿ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸುವ ಉದಾರತೆಯನ್ನು ಮುಖ್ಯಮಂತ್ರಿಗಳು ಪ್ರದರ್ಶಿಸಬೇಕು.
ಕೊರೊನಾ- ನೆರೆಯಂತಹ ಗಂಭೀರ ಸಂದರ್ಭಗಳಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ ಎಂದರು.

ಮನೆ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಎರಡು ತಿಂಗಳ ಗಡುವು ಕೊಟ್ಟ ಕಂದಾಯ ಸಚಿವ ಆರ್‌. ಅಶೋಕ್

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಹಾನಿಯ ಪರಿಹಾರ ತಲುಪಿಸುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಮಾಡಬೇಕಿದೆ. ಪ್ರತಿ ವರ್ಷ ದೇಶಾದ್ಯಂತ ರೈತರಿಂದ 25 ಸಾವಿರ ಕೋಟಿ ಬೆಳೆ ವಿಮೆ ಕಂತು ಸಂಗ್ರಹಿಸಲಾಗುತ್ತದೆ. ಈ ಪೈಕಿ ಕೇವಲ ₹ 10-11 ಸಾವಿರ ಕೋಟಿ ಮಾತ್ರ ರೈತರಿಗೆ ವಿಮೆ ರೀತಿಯಲ್ಲಿ ನೀಡಲಾಗುತ್ತಿದೆ. ಉಳಿದ ಹಣ ಯಾರ ಪಾಲಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಇನ್ನಾದರೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾಡಬೇಕು. ಈಗ ಸಂಭವಿಸಿರುವ ಹಾನಿಯ ತೀವ್ರತೆ ಗಮನಿಸಿ ಪ್ರತಿ ಹೆಕ್ಟೇರಿಗೆ ₹ 50 ಸಾವಿರ ಪರಿಹಾರ ರೈತರಿಗೆ ನೀಡಬೇಕು ಎಂದು ಖಂಡ್ರೆ ಒತ್ತಾಯಿಸಿದರು.

ನೆರೆ ಪರಿಹಾರ ಆದ್ಯತೆಯಾಗಲಿ, ಜನಪ್ರತಿನಿಧಿಗಳು ಜನರ ಜೊತೆಗಿರಬೇಕು

ಮಾಜಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿಕೆ
ಕಲಬುರಗಿ ಜಿಲ್ಲೆಯಲ್ಲಿ ಇಷ್ಟೆಲ್ಲಾ ಘೋರ ಪ್ರವಾಹ ಸ್ಥಿತಿ ಏರ್ಪಟ್ಟು ಜನರು ಹೈರಾಣಾಗುತ್ತಿದ್ದರೂ, ಸಿಎಂ ಇಲ್ಲಿಗೆ ಬರಲು ನಾಲ್ಕು ದಿನಗಳು ಬೇಕಾ? ಇಷ್ಟಕ್ಕೂ ಇದಕ್ಕಿಂತಲೂ ಮುಖ್ಯವಾದ ಕೆಲಸ ಅವರಿಗೆ ಬೆಂಗಳೂಉಲರಿನಲ್ಲಿ ಮಾಡೋದಕ್ಕೆ ಏನಿತ್ತು? ಅಲ್ಲಿ ಏನೇನೂ ಕೆಲಸ ಇರಲಿಲ್ಲ. ಆದರೂ ಸಿಎಂ ಬಂದಿಲ್ಲ. ಇದು ಅವರಿಗೆ ಈ ಭಾಗದ ಮೇಲಿನ ಮಲತಾಯಿ ಧೋರಣೆಯನ್ನು ಎತ್ತಿ ತೋರಿಸುತ್ತದೆ.
ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ