ಆ್ಯಪ್ನಗರ

ಮದ್ಯ ನಿಷೇಧಕ್ಕೆ ‘ಅಬಕಾರಿ ನಿರೀಕ್ಷಕ’ನ ಹೋರಾಟ!

ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ ಖುದ್ದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಪಾದಯಾತ್ರೆ ಕೈಗೊಂಡಿದ್ದಾರೆ.

Vijaya Karnataka Web 24 Nov 2016, 5:55 pm
ಕಲಬುರಗಿ: ಮದ್ಯಪಾನ ನಿಷೇಧಕ್ಕೆ ಒತ್ತಾಯಿಸಿ ಖುದ್ದು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಪಾದಯಾತ್ರೆ ಕೈಗೊಂಡಿದ್ದಾರೆ.
Vijaya Karnataka Web karnatakas excise inspector protest for liquor ban
ಮದ್ಯ ನಿಷೇಧಕ್ಕೆ ‘ಅಬಕಾರಿ ನಿರೀಕ್ಷಕ’ನ ಹೋರಾಟ!


ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಅಬಕಾರಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಎಸ್.ಎಚ್.ಲಿಂಗೇಗೌಡ, ಪಾದಯಾತ್ರೆ ಕೈಗೊಳ್ಳುವ ಮೂಲಕ ಮದ್ಯ ನಿಷೇಧಕ್ಕೆ ರಾಜ್ಯ ಸರಕಾರವನ್ನು ಒತ್ತಾಯಿಸಲು ಮುಂದಾಗಿದ್ದಾರೆ.

ಸಮಾನ ಮನಸ್ಕ ಸ್ನೇಹಿತರೊಂದಿಗೆ ಬಸವ ಕಲ್ಯಾಣದಿಂದ ನವೆಂಬರ್‌ 20ರಂದು ಪಾದಯಾತ್ರೆ ಆರಂಭಿಸಿದ್ದಾರೆ. ಕಲ್ಯಾಣ ಕರ್ನಾಟಕ ಪಾದಯಾತ್ರೆ ಸಮಿತಿ ಮತ್ತು ಯೋಗ ಬಸವ ಪ್ರತಿಷ್ಠಾನದ ನೇತೃತ್ವದಲ್ಲಿ ಆಂದೋಲನ ನಡೆಯುತ್ತಿದೆ.

'ನವೆಂಬರ್‌ 25ರಂದು ಬೆಳಗ್ಗೆ 11ಕ್ಕೆ ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ಕೈಗೊಳ್ಳಲಾಗುವುದು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು 24 ತಾಸುಗಳ ಉಪವಾಸ ನಡೆಸಲಾಗುವುದು,'ಎಂದು ಸುದ್ದಿಗೋಷ್ಠಿಯಲ್ಲಿ ಲಿಂಗೇಗೌಡ ಗುರುವಾರ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ